janadhvani

Kannada Online News Paper

ಮರಿಕ್ಕಳದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ

ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ಮೋಂಟುಗೋಳಿ ಸೆಕ್ಟರ್ ಹಾಗೂ ಮರಿಕ್ಕಳ ಶಾಖೆ ಜಂಟಿ ಆಶ್ರಯದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ಮರಿಕ್ಕಳದಲ್ಲಿ ಅದ್ದೂರಿಯಾಗಿ ನಡೆಯಿತು.ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಧ್ವಜಾರೋಹಣ ನೆರವೇರಿಸಿ,ಸಂದೇಶ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಮರಿಕ್ಕಳ ಜುಮಾ ಮಸೀದಿ ಮುದರ್ರಿಸ್ ಅಬ್ಬಾಸ್ ಸಖಾಫಿ ಮಡಿಕೇರಿ, ಕರ್ನಾಟಕ ರಾಜ್ಯ ಮುಸ್ಲಿಂ ಜಮಾಅತ್ ಉಳ್ಳಾಲ ತಾಲ್ಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್ ಮೋಂಟುಗೋಳಿ, ಎಸ್ಸೆಸ್ಸೆಫ್ ಮರಿಕ್ಕಳ ಬ್ರಾಂಚ್ ಅಧ್ಯಕ್ಷ ಆಲಿಕುಂಞಿ ಮೋಂಟುಗೋಳಿ ಮರಿಕ್ಕಳ ಜಮಾಅತ್ ಕೋಶಾಧಿಕಾರಿ ಮಹಮ್ಮದ್ ಹನೀಫ್ ಎನ್ .ಎಚ್,ಸದರ್ ಉಸ್ತಾದ್ ಝೈನುಲ್ ಆಬಿದ್ ಸಖಾಫಿ,ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಅಧ್ಯಕ್ಷ ಮನ್ಸೂರು ಹಿಮಮಿ ಮೊದಲಾದವರು ಸಂದೇಶ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಮರಿಕ್ಕಳ ಜಮಾಅತ್ ಅಧ್ಯಕ್ಷ ಅಬ್ಬಾಸ್ ಕೊಡಂಚಿಲ್,ಮದರಸ ಮುಅಲ್ಲಿಂರಾದ ಜಬ್ಬಾರ್ ಸಾದಿ, ಕೆಪಿಎಸ್ ಝುಹುರಿ, ಮೋಂಟುಗೋಳಿ ಸೆಕ್ಟರ್ ಅಧ್ಯಕ್ಷ ಅಝರ್ ಅಗಲ್ತಬೆಟ್ಟು, ಮರಿಕ್ಕಳ ಯುನಿಟ್ ಅಧ್ಯಕ್ಷ ಮಜೀದ್ ಮಜಲ್, ಕೆಸಿಎಫ್ ನಾಯಕರಾದ ಇಬ್ರಾಹೀಂ ಮರಿಕ್ಕಳ, ಮೊದಲಾದವರು ಉಪಸ್ಥಿತರಿದ್ದರು.

ಮರಿಕ್ಕಳ ಯುನಿಟ್ ಪ್ರದಾನ ಕಾರ್ಯದರ್ಶಿ ಶಾಕಿರ್ ಚಂದಹಿತ್ತಿಲು ಸ್ವಾಗತಿಸಿದರು. ಸಿದ್ದೀಕ್ ಮೊಂಟೆಪದವು ವಂದಿಸಿದರು. ಶಾಫಿ ಮೊಂಟುಗೋಳಿ ಕಾರ್ಯಕ್ರಮ ನಿರೂಪಿಸಿದರು.