ಭಾರತದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿ ಅಧೀನದಲ್ಲಿ ವಿವಿಧ ಸ್ಥಳಗಳಲ್ಲಿ ಆಗಸ್ಟ್ 13ರಂದು ರಕ್ತದಾನ ಶಿಬಿರ ನಡೆಸಲಾಯಿತು.
ಅನಿವಾಸಿಗಳಾದ ಭಾರತೀಯರಿಗೆ ಈ ವರ್ಷದ ಸ್ವಾತಂತ್ರ್ಯ ದಿನವನ್ನು ವಿಭಿನ್ನ ರೀತಿಯಲ್ಲಿ ಆಚರಿಸಲು ಕೆಸಿಎಫ್ ಅವಕಾಶ ಮಾಡಿಕೊಟ್ಟಿದೆ.
ರಕ್ತದಾನ ಶಿಬಿರ, ಮಕ್ಕಳಿಗೆ ಚಿತ್ರ ರಚನೆ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಹೀಗೆ ವಿಭಿನ್ನವಾದ ರೀತಿಯಲ್ಲಿ ಅವಕಾಶವನ್ನು ಮಾಡಿಕೊಟ್ಟಿದೆ.
ಇದರ ಭಾಗವಾಗಿ ಆಗಸ್ಟ್ 13ರಂದು ಸೌದಿ ಅರೇಬಿಯಾದ ಜಿದ್ದಾ, ದಮ್ಮಾಮ್, ಅಲ್-ಕೋಬಾರ್, ಜುಬೈಲ್ ಹಾಗೂ ಅಲ್’ಹಸ್ಸಾದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ. ಒಂದೇ ದಿನದಲ್ಲಿ ವಿವಿಧ ಭಾಗಗಳಲ್ಲಾಗಿ 250ಕ್ಕೂ ಹೆಚ್ಚು ಯುನಿಟ್ ರಕ್ತಗಳನ್ನು ನೀಡಲಾಗಿದೆ.
ಕೆಸಿಎಫ್ ನಡೆಸಿದ ಬೃಹತ್ ರಕ್ತದಾನ ಶಿಬಿರಗಳನ್ನು ಮೆಚ್ಚಿ ಬ್ಲಡ್ ಬ್ಯಾಂಕ್ ಅಧಿಕಾರಿಗಳು ಅಭಿನಂದನೆಗಳನ್ನು ಹೇಳಿ ಇನ್ನು ಮುಂದೆಯೂ ಇದೇ ರೀತಿ ಸಾಮಾಜಿಕ ಸೇವೆಗಳನ್ನು ಮುಂದುವರಿಸಲು ಹುರಿತುಂಬಿದರು.
ಸೌದಿ ಅರೇಬಿಯಾದ ರಾಜಧಾನಿಯಾದ ರಿಯಾದ್ ನಲ್ಲಿ ಆಗಸ್ಟ್ 15 ಕೆಸಿಎಫ್ ಕಾರ್ಯಕರ್ತರ ಸಮ್ಮಿಲನ ನಡೆಸಲಾಯಿತು. ಈ ಕಾರ್ಯಕ್ರಮಕ್ಕೆ ಸೌದಿ ಮಿಲಿಟರಿ ಹಾಸ್ಪಿಟಲ್ ವೈದ್ಯರಾದ ಡಾ| ಅಬ್ದುಲ್ ಮಜೀದ್ ರವರು ಮುಖ್ಯ ಅತಿಥಿಯಾಗಿ ಆಗಮಿಸಿ ಸಂದೇಶ ಭಾಷಣವನ್ನು ಮಾಡಿದರು.
ಒಟ್ಟಿನಲ್ಲಿ ಭಾರತದ 75ನೇ ಸ್ವಾತಂತ್ರ್ಯೋತ್ಸವವನ್ನು ಕೆಸಿಎಫ್ ಕಾರ್ಯಕರ್ತರು ಹಲವು ಕಡೆ ಹಲವಾರು ಕಾರ್ಯಕ್ರಮಗಳನ್ನು ನಡೆಸುವುದರೊಂದಿಗೆ ವಿಜ್ರಂಭಣೆಯಿಂದ ಆಚರಿಸಲಾಯಿತು.






















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ