ಪುತ್ತೂರು: ಕಬಕ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಾತಂತ್ರ್ಯ ದಿನದಂದು ಸಾವರ್ಕರ್ ಫೋಟೊ ಇದ್ದ ವಾಹನವನ್ನು ತಡೆದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಮೂವರಿಗೆ ಪುತ್ತೂರು ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ.
ಕಬಕ ಗ್ರಾಮ ಪಂಚಾಯತ್ ವತಿಯಿಂದ ನಡೆಸಲಾಗಿದ್ದ ಸ್ವರಾಜ್ಯ ರಥ ಯಾತ್ರೆಯಲ್ಲಿ ಸಾವರ್ಕರ್ ಭಾವಚಿತ್ರವನ್ನು ಅಳವಡಿಸಿರುವುದನ್ನು ಆಕ್ಷೇಪಿಸಿದ ಇವರು, ರಥ ಯಾತ್ರೆ ತಡೆದು ಪ್ರತಿಭಟನೆ ವ್ಯಕ್ತಪಡಿಸಿದ್ದರು.
ಈ ಬಗ್ಗೆ ಪಂಚಾಯತ್ ವತಿಯಿಂದ ಪುತ್ತೂರು ನಗರ ಠಾಣೆಗೆ ದೂರು ನೀಡಲಾಗಿತ್ತು. ದೂರಿನಂತೆ ಪೊಲೀಸರು 7 ಮಂದಿಯ ವಿರುದ್ಧ ಕೇಸು ದಾಖಲಿಸಿಕೊಂಡಿದ್ದು, ಕಬಕ ನಿವಾಸಿಗಳಾದ ಅಝೀಝ್, ಶಮೀರ್ ಮತ್ತು ಕುಡಿಪ್ಪಾಡಿ ನಿವಾಸಿ ಅಬ್ದುಲ್ ರಹಿಮಾನ್ ಎಂಬವರನ್ನು ಬಂಧಿಸಿದ್ದರು. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.
ಇವರ ಪರವಾಗಿ ವಕೀಲರಾದ ಅಶ್ರಫ್ ಅಗ್ನಾಡಿ, ಮಜೀದ್ ಖಾನ್, ಅಬ್ದುಲ್ ರಹಿಮಾನ್, ಮುಸ್ತಫಾ ವಾದಿಸಿದ್ದರು
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ