ರಿಯಾದ್:ವಲಸಿಗರಿಗೆ ಮತ್ತೆ ದಯೆ ತೋರಿದ ಸೌದಿ ದೊರೆ ಸಲ್ಮಾನ್. ಭಾರತ ಸೇರಿದಂತೆ ಸೌದಿಗೆ ಪ್ರವೇಶ ನಿರ್ಬಂಧವಿರುವ ದೇಶಗಳ ವಲಸಿಗರಿಗೆ ಇಖಾಮ, ಮರು ಪ್ರವೇಶ ಮತ್ತು ಭೇಟಿ ವೀಸಾವನ್ನು ಉಚಿತವಾಗಿ ವಿಸ್ತರಿಸಲು ರಾಜ ಸಲ್ಮಾನ್ ಆದೇಶಿಸಿದ್ದಾರೆ. ಜವಾಝಾತ್ ನಿರ್ದೇಶನಾಲಯವು, ವಿದೇಶಿಯರ ಇಕಾಮ, ಮರು ಪ್ರವೇಶ ಮತ್ತು ಭೇಟಿ ವೀಸಾವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ ಎಂದು ಘೋಷಿಸಿದೆ.
ಭಾರತ ಸೇರಿದಂತೆ ನಿಷೇಧಿತ ದೇಶಗಳಲ್ಲಿ ಸಿಲುಕಿರುವ ಸೌದಿ ವಲಸಿಗರ ಇಕಾಮ ಮತ್ತು ಮರು ಪ್ರವೇಶವನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸುವಂತೆ ಈ ಹಿಂದೆ ರಾಜ ಸಲ್ಮಾನ್ ನಿರ್ದೇಶನ ನೀಡಿದ್ದರು. ಅದರಂತೆ ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ. ಇದಕ್ಕಾಗಿ ಯಾರೂ ಕಚೇರಿಗಳನ್ನು ಸಂಪರ್ಕಿಸಬೇಕಾಗಿಲ್ಲ ಮತ್ತು ನವೀಕರಣವನ್ನು ರಾಷ್ಟ್ರೀಯ ಮಾಹಿತಿ ಕೇಂದ್ರದ ಸಹಯೋಗದೊಂದಿಗೆ ಸ್ವಯಂಚಾಲಿತವಾಗಿ ಮಾಡಲಾಗುವುದು ಎಂದು ಜವಾಝಾತ್ ಹೇಳಿದೆ.
ಪ್ರಯಾಣದ ನಿರ್ಬಂಧಗಳನ್ನು ಹೊಂದಿರುವ ದೇಶಗಳಲ್ಲಿರುವ ವಲಸಿಗರ ಇಕಾಮಾ, ಮರು ಪ್ರವೇಶ ಮತ್ತು ಸಂದರ್ಶಕರ ವೀಸಾಗಳನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸುವಂತೆ ರಾಜರು ಈ ಹಿಂದೆ ನಿರ್ದೇಶನ ನೀಡಿದ್ದರು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ