ಮನಾಮ: ಬಹ್ರೇನ್ ಭಾರತ ಸೇರಿದಂತೆ ನಾಲ್ಕು ದೇಶಗಳನ್ನು ಕೆಂಪು ಪಟ್ಟಿಯಿಂದ ತೆಗೆದುಹಾಕಿದೆ. ಐದು ಹೊಸ ದೇಶಗಳನ್ನು ಸೇರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ವ್ಯವಹಾರಗಳಿಂದ ಘೋಷಣೆ ಮಾಡಲಾಗಿದೆ. ಈ ನಿರ್ಧಾರವು ಸೆಪ್ಟೆಂಬರ್ 3 ರಿಂದ ಜಾರಿಗೆ ಬರಲಿದೆ.
ಅದೇ ಸಮಯದಲ್ಲಿ, ಕೆಂಪು ಪಟ್ಟಿಯಲ್ಲಿ ಒಳಪಟ್ಟ ದೇಶಗಳ ಪ್ರಯಾಣಿಕರಿಗೆ ಪ್ರಸ್ತುತ ಜಾರಿಯಲ್ಲಿರುವ ನಿಯಮಗಳು ಅನ್ವಯವಾಗುತ್ತವೆ.
ಭಾರತ, ಪಾಕಿಸ್ತಾನ, ಪನಾಮ ಮತ್ತು ಡೊಮಿನಿಕನ್ ಗಣರಾಜ್ಯವನ್ನು ಕೆಂಪು ಪಟ್ಟಿಯಿಂದ ಹೊರಗಿಡಲಾಗಿದೆ.ಬೋಸ್ನಿಯಾ ಮತ್ತು ಹರ್ಜೆಗೋವಿನಾ, ಸ್ಲೊವೇನಿಯಾ, ಇಥಿಯೋಪಿಯಾ, ಕೋಸ್ಟರಿಕಾ ಮತ್ತು ಈಕ್ವೆಡಾರ್ ಅನ್ನು ಕೆಂಪು ಪಟ್ಟಿಗೆ ಸೇರಿಸಲಾಗಿದೆ. ಕೆಂಪು ಪಟ್ಟಿ ದೇಶಗಳ ಮೇಲಿನ ನಿರ್ಬಂಧಗಳು ಮುಂದುವರಿಯಲಿದೆ. ಇಪ್ಪತ್ತೈದು ದೇಶಗಳು ಪ್ರಸ್ತುತ ಕೆಂಪು ಪಟ್ಟಿಯಲ್ಲಿವೆ.
ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಮೇ 23 ರಿಂದ ಭಾರತದಿಂದ ಬರುವ ಪ್ರಯಾಣಿಕರ ಮೇಲೆ ನಿರ್ಬಂಧಗಳನ್ನು ವಿಧಿಸಲಾಗಿತ್ತು. ಬಹ್ರೇನ್ ಪ್ರಜೆಗಳಿಗೆ ಮತ್ತು ಬಹ್ರೇನ್ ನಲ್ಲಿ ನಿವಾಸ ಪರವಾನಗಿ ಹೊಂದಿರುವವರಿಗೆ ಮಾತ್ರ ಭಾರತದಿಂದ ಬಹ್ರೇನ್ ಪ್ರವೇಶಿಸಲು ಅವಕಾಶವಿತ್ತು.
ಹೊಸ ನಿರ್ಧಾರವು ಇತರ ಗಲ್ಫ್ ರಾಷ್ಟ್ರಗಳು ಪ್ರಯಾಣ ನಿರ್ಬಂಧಗಳನ್ನು ತೆಗೆದುಹಾಕಲು ಸಹಾಯ ಮಾಡಲಿದೆ ಎಂದು ವಲಸಿಗರು ಆಶಿಸುತ್ತಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ