ಬೆಂಗಳೂರು, ಸೆ.9: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನದಲ್ಲಿ ಇದುವರೆಗ ಜಾರಿಯಲ್ಲಿದ್ದ ವಾರಾಂತ್ಯದ ಕರ್ಫ್ಯೂವನ್ನು ತೆರವುಗೊಳಿಸಲು ಆದೇಶಿಸಲಾಗಿದೆ.
ಗಡಿ ಜಿಲ್ಲೆಗಳಲ್ಲಿ ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ಕಂಡು ಬಂದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಕೊವಿಡ್ ಸೋಂಕು ಹೆಚ್ಚಳವಾದರೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕರ್ಫ್ಯೂ ಜಾರಿಗೊಳಿಸಬಹುದಾಗಿದೆ.
ಕೋವಿಡ್-19 ನಿಯಂತ್ರಿಸುವ ದೃಷ್ಟಿಯಿಂದ ಸಾರ್ವಜನಿಕರು ನಿಯಂತ್ರಣ ಕ್ರಮಗಳಾದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ವೈಯಕ್ತಿಕ ಮತ್ತು ಸಾಮಾಜಿಕ ಸ್ವಚ್ಛತೆ ಕಡೆಗೆ ಗಮನ ಹರಿಸಬೇಕು. ಈಗ ಜಾರಿಯಲ್ಲಿರುವ ಮಾರ್ಗಸೂಚಿಯನ್ನು ಜನರು ಕಡ್ಡಾಯವಾಗಿ ಪಾಲನೆ ಮಾಡಬೇಕು. ಪಾಲನೆ ಮಾಡದೆ ಮತ್ತೆ ಸೋಂಕು ಹೆಚ್ಚಾದ್ರೆ, ಈ ನಿಯಮಗಳನ್ನು ಅನಿವಾರ್ಯವಾಗಿ ನಿಲ್ಲಿಸಲಾಗುವುದು. ಜನರು ಸರ್ಕಾರದ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲನೆ ಮಾಡಿ, ಸೋಂಕು ಕಡಿಮೆ ಮಾಡಲು ಸಹಕಾರಿಸಬೇಕು ಎಂದು ರಾಜ್ಯ ಸರ್ಕಾರ ತಿಳಿಸಿದೆ.
ದ.ಕ.ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದು- ಜಿಲ್ಲಾಧಿಕಾರಿ
ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕು ಇಳಿಮುಖ ಕಾಣುತ್ತಿದ್ದು, ಈಗಾಗಲೇ ಜಾರಿಯಲ್ಲಿದ್ದ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಿರುವುದಾಗಿ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಘೋಷಣೆ ಮಾಡಿದ್ದಾರೆ.
ಜಿಲ್ಲೆಯಲ್ಲಿ ಪ್ರತಿದಿನ ವಿಧಿಸಿದ್ದ ನೈಟ್ ಕರ್ಫ್ಯೂ ಮುಂದುವರೆಯಲಿದೆ. ಧಾರ್ಮಿಕ ಸ್ಥಳಗಳಲ್ಲಿ ದೇವರ ದರ್ಶನಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ