ಬಂಟ್ವಾಳ:( ಜನಧ್ವನಿ ವಾರ್ತೆ) ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಷನ್ (ಎಸ್ಸೆಸ್ಸೆಫ್) ಬಂಟ್ವಾಳ ಡಿವಿಷನ್ ವತಿಯಿಂದ ರಾಜ್ಯ ಸಮಿತಿಯ ಸುತ್ತೋಲೆಯಂತೆ “ಮತದಾನ ನಮ್ಮ ಹಕ್ಕು ಕಾರ್ಯಕ್ರಮ ” ಇತ್ತೀಚೆಗೆ ದಾರುಲ್ ಇಝ್ಝಾ ಕೌಡೇಲಿನಲ್ಲಿ ನಡೆಯಿತು. ಡಿವಿಷನ್ ಅಧ್ಯಕ್ಷರಾದ ಅಬ್ದುಲ್ ರಶೀದ್ ವಗ್ಗ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಉಪಾಧ್ಯಕ್ಷರಾದ ಇಬ್ರಾಹಿಮ್ ಸಖಾಫಿ ಉಸ್ತಾದರು ದುವಾಗೈದು_ _ಚಾಲನೆ ನೀಡಿದರು. ಪ್ರಧಾನ ಕಾರ್ಯದರ್ಶಿ ಆಬಿದ್ ನಈಮಿ ಸ್ವಾಗತಿಸಿದರು. ಕೌಡೇಲ್ ಖತೀಬರಾದ ಮಜೀದ್ ಸಅದಿ ಉಸ್ತಾದರು ಕಾರ್ಯಕ್ರಮವನ್ನು ಉದ್ಘಾಟಿಸಿ, ಜಿಲ್ಲಾ ಕಾರ್ಯದರ್ಶಿ ಶರೀಫ್ ನಂದಾವರ ಆಶಾಂಶ ಭಾಷಣ ಮಾಡಿದರು._ ಎಸ್ಸೆಸ್ಸೆಫ್ ಇಹ್ಸಾನ್ ಕರ್ನಾಟಕ ಇದರ ರಾಜ್ಯಾಧ್ಯಕ್ಷರಾದ ಶಾಫಿ ಸಅದಿ ಉಸ್ತಾದರು ಮತದಾನದ ಮಹತ್ವವನ್ನು ವಿವರಿಸಿದರು.
ಹದಿನೆಂಟು ವರುಷ ತುಂಬಿದ ಪ್ರತಿಯೊಬ್ಬರಿಗೂ ವಿವೇಚನಾ ಶಕ್ತಿ ಇದೆ. ತಮ್ಮ ರಾಜ್ಯದಲ್ಲಿ ಯಾರು ಆಡಳಿತ ನಡೆಸಬೇಕು, ಯಾವ ಅಭ್ಯರ್ಥಿಯನ್ನು ವಿಧಾನಸಭೆಗೆ ಕಳುಹಿಸಿ ಕೊಡಬೇಕೆಂಬ ಜ್ಞಾನ ಪ್ರತಿಯೊಬ್ಬರಿಗೂ ಇದೆ. ಎಸ್ಸೆಸ್ಸೆಫ್ ಕಾರ್ಯಕರ್ತರು ಯಾವುದೇ ರಾಜಕೀಯ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯಾಚರಿಸದೆ, ಪ್ರಜಾಪ್ರಭುತ್ವ ಭಾರತದ ಸಂವಿಧಾನವನ್ನು ಗೌರವಿಸಿ ನಾಡಿನ ಹಾಗೂ ಸಮುದಾಯದ ಒಳಿತಿಗಾಗಿ ಶ್ರಮಿಸುವ ಅಭ್ಯರ್ಥಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡಬೇಕಾಗಿ ಕರೆ ನೀಡಿದರು.

_ಕಾರ್ಯಕ್ರಮದಲ್ಲಿ ಡಿವಿಷನ್ ಪದಾಧಿಕಾರಿಗಳು ಹಾಗೂ ಕಾರ್ಯಾಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು._
*✍🏻 ಹಾರಿಸ್ ಪೆರಿಯಪಾದೆ*















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ