ಎಸ್ಎಸ್ಎಫ್ ಕೊಡಗು ಜಿಲ್ಲಾ ಸಮಿತಿಯ ಅರ್ಧವಾರ್ಷಿಕ ಅವಲೋಕನ ಸಭೆಯು ರಿವ್ಯೂ ಹೆಸರಿನಲ್ಲಿ 13-09-2021 ಸೋಮವಾರದಂದು ನಾಪೋಕ್ಲುವಿನ ಅಲ್ಝೂಕ್ ರೆಸ್ಟೋರೆಂಟ್ ನಲ್ಲಿ ನಡೆಯಿತು.
ಜಿಲ್ಲಾಧ್ಯಕ್ಷರಾದ ಶಾಫಿ ಸಅದಿ ಸೋಮವಾರಪೇಟೆಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಎಸ್ ವೈ ಎಸ್ ಜಿಲ್ಲಾಧ್ಯಕ್ಷರಾದ ಅಬ್ದುಲ್ಲಾ ಸಖಾಫಿ ಉದ್ಘಾಟನೆ ನಿರ್ವಹಿಸಿದರು.
ಜಿಲ್ಲೆಯ ಕೌನ್ಸಿಲರ್ಸ್ಗಳನ್ನು ಒಳಗೊಂಡ ಪ್ರಸ್ತುತ ಕಾರ್ಯಕ್ರಮವನ್ನು ರಾಜ್ಯ ಸಮಿತಿಯಿಂದ ವೀಕ್ಷಕರಾಗಿ ಆಗಮಿಸಿದ ಅಬ್ದುಲ್ ಹಕೀಮ್ ಬೆಂಗಳೂರುರವರು ಉಸ್ತುವಾರಿ ವಹಿಸಿಕೊಂಡರು ಹಾಗೂ ಪ್ರಧಾನ ಕಾರ್ಯದರ್ಶಿ ಮುಜೀಬ್ ಕೊಂಡಂಗೇರಿ ವರದಿ ವಾಚಿಸಿದಾಗ ಕೋಶಾಧಿಕಾರಿ ಲೆಕ್ಕಪತ್ರ ಮಂಡಿಸಿದರು.

ಪ್ರಸ್ತುತ ಕಾರ್ಯಕ್ರಮದಲ್ಲಿ ನವೆಂಬರ್ 20-21ರಂದು ಪಾಲಿಬೆಟ್ಟದ ಹುಂಡಿಯಲ್ಲಿ ನಡೆಯುವ ಪ್ರತಿಭೋತ್ಸವ ಕಾರ್ಯಕ್ರಮದ ದಿನಾಂಕ ಘೋಷಣೆಯನ್ನು ರಾಜ್ಯ ಸಮಿತಿಯ ಮಾಜಿ ಅಧ್ಯಕ್ಷರಾದ ಅಬ್ದುಲ್ ಹಫೀಳ್ ಸಅದಿ ನಿರ್ವಹಿಸಿದರು.
ಮೌಲಾನಾ ಕೆ ಎಂ ಅಬೂಬಕರ್ ಸಿದ್ದಿಕ್ ಮೋಂಟುಗೋಳಿ ರವರು ಸಂಘಟನಾ ತರಗತಿ ನಡೆಸಿಕೊಟ್ಟರು.ರಾಜ್ಯ ಸಮಿತಿ ನಾಯಕರಾದ ಮುಬಶ್ಶಿರ್ ಅಹ್ಸನಿ, ಸಫ್ವಾನ್ ಚಿಕ್ಕಮಗಳೂರು, ಶರೀಫ್ ಹೊಸತೋಟ
ಮುಂತಾದವರು ಅತಿಥಿಗಳಾಗಿ ಭಾಗವಹಿಸಿ ಹಿತವಚನವನ್ನು ನುಡಿದರು.
ಲಾಕ್ಡೌನ್ ಸಂದರ್ಭಗಳಲ್ಲಿ ನಡೆದ ಸುಮಾರು 34 ಆನ್ಲೈನ್ ಸ್ಪರ್ಧಾ ಕಾರ್ಯಕ್ರಮಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.ಜಿಲ್ಲಾ ಕ್ಯಾಂಪಸ್ ಕಾರ್ಯದರ್ಶಿ ಜುನೈದ್ ನೆಲ್ಲಿಹುದಿಕೇರಿ ಸ್ವಾಗತಿಸಿ ಇಬ್ರಾಹಿಂ ಮಾಸ್ಟರ್ ಕಾರ್ಯಕ್ರಮವನ್ನು ನಿರೂಪಿಸಿದರು.ಅಷ್ಕರ್ ಸಖಾಫಿ ಕೊಟ್ಟಮುಡಿ ವಂದನಾರ್ಪಣೆಗೈದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ