ರಿಯಾದ್ : ದೇಶದಲ್ಲಿ ಕೋವಿಡ್ ವಿರುದ್ಧ ಹೆಚ್ಚಿನ ಸಂಖ್ಯೆಯ ಲಸಿಕೆ ಹಾಕುವಿಕೆಯಿಂದಾಗಿ ಸೌದಿ ಅರೇಬಿಯಾದ ಕೆಲವು ಕೋವಿಡ್ ಲಸಿಕೆ ಕೇಂದ್ರಗಳನ್ನು ಮುಚ್ಚಲಾಗಿದೆ.ಪ್ರತಿ ದಿನ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ.
ಕೋವಿಡ್ ಲಸಿಕೆಯನ್ನು ಇದುವರೆಗೆ ವಿಶೇಷ ವ್ಯಾಕ್ಸಿನೇಷನ್ ಕೇಂದ್ರಗಳನ್ನು ಒಳಗೊಂಡಂತೆ ದೇಶದಾದ್ಯಂತ 585 ಕೇಂದ್ರಗಳಲ್ಲಿ ವಿತರಿಸಲಾಗಿದೆ. ಡಿಸೆಂಬರ್ 17 ರಂದು ಆರಂಭವಾದ ವ್ಯಾಕ್ಸಿನೇಷನ್ ಪ್ರೋಗ್ರಾಂ ಇದುವರೆಗೆ 4 ಕೋಟಿ 5 ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆಗಳನ್ನು ವಿತರಿಸಿದೆ. ದೇಶದ 3.5 ಕೋಟಿ ಜನಸಂಖ್ಯೆಯಲ್ಲಿ, 2 ಕೋಟಿ 30 ಲಕ್ಷಕ್ಕೂ ಮಿಕ್ಕವರು ಮೊದಲ ಡೋಸ್ ತೆಗೆದುಕೊಳ್ಳುವ ಮೂಲಕ ಮತ್ತು 1 ಕೋಟಿ 75 ಲಕ್ಷ ಮಂದಿ 2 ಡೋಸ್ ತೆಗೆದುಕೊಳ್ಳುವ ಮೂಲಕ ರೋಗನಿರೋಧಕ ಶಕ್ತಿಯನ್ನು ಗಳಿಸಿದ್ದಾರೆ.
ರೋಗನಿರೋಧಕ ಶಕ್ತಿಯನ್ನು ಹೊಂದಿರುವವರ ಸಂಖ್ಯೆ ಏರಿಕೆಯಾದಂತೆ, ಲಸಿಕೆ ಸ್ವೀಕರಿಸಲು ಬರುವ ಜನರ ಸಂಖ್ಯೆಯೂ, ಪ್ರತಿ ದಿನ ಪ್ರಕರಣಗಳ ಸಂಖ್ಯೆಯೂ ತೀವ್ರವಾಗಿ ಕಡಿಮೆಯಾಗಿದೆ. ಇದರೊಂದಿಗೆ, ನಿರ್ದಿಷ್ಟವಾಗಿ ಲಸಿಕೆಗಾಗಿ ತೆರೆದಿರುವ ಕೆಲವು ಕೇಂದ್ರಗಳು ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿವೆ.
ಕತೀಫ್ನ ಅಮೀರ್ ಮೊಹಮ್ಮದ್ ಬಿನ್ ಫಹದ್ ಆಸ್ಪತ್ರೆಯಲ್ಲಿನ ಲಸಿಕೆ ಕೇಂದ್ರ ಸೇರಿದಂತೆ ಹಲವಾರು ಲಸಿಕೆ ಕೇಂದ್ರಗಳನ್ನು ಮುಚ್ಚಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅದೇ ಸಮಯದಲ್ಲಿ, ಇತರ ಕೇಂದ್ರಗಳ ಮೂಲಕ 12 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡುವುದನ್ನು ಮುಂದುವರಿಸಲಾಗುತ್ತಿದೆ.
ಅಂಗಾಂಗ ಕಸಿ ಶಸ್ತ್ರಚಿಕಿತ್ಸೆ ಮತ್ತು ಡಯಾಲಿಸಿಸ್ಗೆ ಒಳಗಾಗುವ ರೋಗಿಗಳಿಗೆ ಕೋವಿಡ್ ವ್ಯಾಕ್ಸ್ನ ಮೂರನೇ ಡೋಸ್ ನೀಡಲಾಗುವುದು ಎಂದು ಆರೋಗ್ಯ ಸಚಿವಾಲಯ ಘೋಷಿಸಿದೆ. ದೇಶದಲ್ಲಿ ಗಂಭೀರ ಸ್ಥಿತಿಯಲ್ಲಿರುವವರ ಸಂಖ್ಯೆ 378 ಕ್ಕೆ ಇಳಿದಿದೆ. 75 ಹೊಸ ಪ್ರಕರಣಗಳು, 64 ಗುಣಪಡಿಸುವಿಕೆಗಳು ಮತ್ತು 6 ಮರಣಗಳು ಇಂದು ವರದಿಯಾಗಿವೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ