ಮಂಗಳೂರು: ಮೈಸೂರು ದೇಗುಲ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲ ಭಾರತ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಅವರು, ಹಿಂದೂಗಳ ಮೇಲೆ ದಾಳಿಯಾದಾಗ ಗಾಂಧೀಜಿಯನ್ನೇ ಹತ್ಯೆ ಮಾಡಲಾಗಿದೆ. ಅಂತಹ ಸಂದರ್ಭದಲ್ಲಿ ನೀವು ಯಾವ ಲೆಕ್ಕ ಬೊಮ್ಮಾಯಿಯವರೇ. ನಿಮ್ಮ ವಿಚಾರದಲ್ಲಿ ಅಲೋಚನೆ ಮಾಡಲು ಸಾಧ್ಯವಿಲ್ಲ ಅಂದುಕೊಳ್ಳಬೇಡಿ.ದೇಗುಲ ಧ್ವಂಸ ಮಾಡಿರೋದು ಒಂದು ಕೊಲೆಗೆ ಸಮಾನ ಎಂದು ಹೇಳಿಕೆ ನೀಡಿದ್ದಾರೆ.
ದೇವಾಲಯ ಧ್ವಂಸದ ಮೂಲಕ ಅಲ್ಪಸಂಖ್ಯಾತ ಮತಗಳಿಕೆ ಪ್ರಯತ್ನ ಮಾಡುತ್ತಿದ್ದೀರಿ. ಬಿಜೆಪಿಯಿಂದ ಅಲ್ಪಸಂಖ್ಯಾತರ ಓಲೈಕೆಯಾಗುತ್ತಿದೆ. ಬೊಮ್ಮಾಯಿಯವರೇ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರೇ, ಧಾರ್ಮಿಕ ದತ್ತಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆಯವರೇ ನೀವು ಮೊಟ್ಟೆ ಕದ್ದು ಹಣಮಾಡಿದ್ದೀರಿ. ಇದೀಗ ದೇವಸ್ಥಾನಗಳನ್ನು ಧ್ವಂಸ ಮಾಡಿ ಯಾಕೆ ದುಡ್ಡು ಮಾಡಲು ಹೊರಟಿದ್ದೀರಿ. ಸಂಘಪರಿವಾರ ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡೋದು ಅಲ್ಲ. ಸಂಘಟನೆಗಳು ಬಿಜೆಪಿಯನ್ನೇ ಬಹಿಷ್ಕಾರ ಮಾಡಲಿ ಎಂದು ವಾಗ್ದಾಳಿ ನಡೆಸಿದರು.
ಯಾವ ತುಘಲಕ್ ಸರ್ಕಾರ ನಡೆಸ್ತಾ ಇದೀರಾ ನೀವು, ತಾಲಿಬಾನ್ ಸರ್ಕಾರ ಇದ್ಯಾ ಕರ್ನಾಟಕದಲ್ಲಿ? ತಾಲಿಬಾನ್ ಆದ್ರೂ ಪರ್ವಾಗಿಲ್ಲ, ಇದಕ್ಕಿಂತ ಕೀಳು ಮಟ್ಟದ ಸರ್ಕಾರ ನಡೆಸ್ತಾ ಇದೀರ ನೀವು. ನಾಚಿಕೆ ಇಲ್ಲದ ಮುಖ್ಯಮಂತ್ರಿ, ನೈತಿಕತೆ ಇಲ್ಲದ ಮಂತ್ರಿ ಮಂಡಲ. ಭಾರತೀಯ ಜನತಾ ಪಕ್ಷವೇ ಬೆನ್ನು ಮೂಳೆ ಇಲ್ಲದ ಪಕ್ಷ ಎಂದು ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಕರ್ನಾಟಕದಲ್ಲಿ, ಸೆಪ್ಟೆಂಬರ್ 29, 2009 ರ ನಂತರ ನಿರ್ಮಿಸಲಾದ ಸಾರ್ವಜನಿಕ ಸ್ಥಳಗಳಲ್ಲಿನ ಅಕ್ರಮ ಕಟ್ಟಡಗಳನ್ನು ಕೆಡವಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಸರ್ಕಾರದ ಅಂಕಿಅಂಶಗಳ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ ಸುಮಾರು 6,395 ಅಕ್ರಮ ಧಾರ್ಮಿಕ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ