ಬೆಳ್ತಂಗಡಿ, ಸೆ 20: ನಂಜನಗೂಡಿನಲ್ಲಿ ಬಿಜೆಪಿ ಸರ್ಕಾರದ ಆದೇಶದಂತೆ ದೇವಸ್ಥಾನ ಕೆಡವಿದ ವಿಚಾರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತಾನಾಡುವ ಸಂದರ್ಭದಲ್ಲಿ ಹಿಂದೂ ಮಹಾಸಭಾದ ನಾಯಕ ಧರ್ಮೇಂಧ್ರ ಎನ್ನುವವರು ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯವಾದ ರಾಷ್ಟ್ರಪಿತ ಮಹಾತ್ಮ ಗಾಂಧಿಯ ಹತ್ಯೆಯನ್ನು ಸಮರ್ಥಿಸಿ ಆ ಹತ್ಯೆಯನ್ನು ನಾವೇ ಮಾಡಿದ್ದು ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.
ಅಲ್ಲದೆ, ಹಿಂದುತ್ವದ ವಿರುದ್ಧವಾಗಿ ನಡೆದಿದ್ದಲ್ಲಿ ರಾಜ್ಯದ ಮುಖ್ಯಮಂತ್ರಿಯನ್ನು ಕೂಡ ನಾವು ಬಿಡುವವರಲ್ಲ ಎಂದು ಬೆದರಿಕೆಯೊಡ್ಡಿದ ಹಿಂದೂ ಮಹಾಸಭಾದ ಕಾರ್ಯದರ್ಶಿ ಧರ್ಮೇಂದ್ರ ಹಾಗೂ ಅನುಯಾಯಿಗಳ ವಿರುದ್ಧ ಪೋಲಿಸರು ದೇಶದ್ರೋಹದ ಅಡಿಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಬೇಕು ಹಾಗೂ ಈ ಕೂಡಲೇ ಕೇಂದ್ರ ಸರಕಾರ ಎನ್. ಐ. ಎ ತನಿಖೆಗೆ ಆದೇಶ ನೀಡುವ ಮೂಲಕ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪ್ರತಿಭಟನೆಯ ಮೂಲಕ ರಾಜ್ಯಪಾಲರೊಂದಿಗೆ ಆಗ್ರಹಿಸಲಾಯಿತು.
ಪ್ರತಿಭಟನೆಯ ನೇತೃತ್ವವನ್ನು ಎಸ್. ಡಿ. ಪಿ. ಐ ವಿಧಾನ ಸಭಾಧ್ಯಕ್ಷ ನಿಸಾರ್ ಕುದ್ರಡ್ಕ ವಹಿಸಿದ್ದರು.
ವಿಧಾನಸಭಾ ಸದಸ್ಯ ನವಾಜ್ ಕಟ್ಟೆ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು
ಎಸ್. ಡಿ. ಪಿ. ಐ. ಜಿಲ್ಲಾ ಸಮಿತಿ ಸದಸ್ಯ ಅಕ್ಬರ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾಧ್ಯಕ್ಷ ಮುಸ್ತಫಾ ಜಿ. ಕೆ, ಎಸ್. ಡಿ. ಪಿ. ಐ ಬೆಳ್ತಂಗಡಿ ವಿಧಾನ ಸಭಾ ಉಪಾಧ್ಯಕ್ಷ ಹನೀಫ್ ಪುಂಜಾಲಕಟ್ಟೆ, ಸಾಲಿ ಮದ್ದಡ್ಕ,ಸಾದಿಕ್ ಲಾಯ್ಲಾ, ಸದಸ್ಯರಾದ ಇನಾಸ್ ರೋಡ್ರಿಗಸ್, ಅಬ್ದುಲ್ ಅಜೀಜ್ ಝುಹ್ರಿ, ಟಿ. ಎಸ್. ಹನೀಫ್, ಹೈದರ್ ನೀರ್ಸಾಲ್ ಉಪಸ್ಥಿತರಿದ್ದರು.
ಕಾರ್ಯದರ್ಶಿ ನಿಜಾಮ್ ಗೇರುಕಟ್ಟೆ ಸ್ವಾಗತಿಸಿ, ಫಝಲ್ ರಹ್ಮಾನ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ವಿದ್ಯಾರ್ಥಿನಿಯರಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ನಿರಾಕರಣೆ- ಕ್ರಮ ಕೈಗೊಳ್ಳಲು ಆಗ್ರಹ
ಬೆಳ್ತಂಗಡಿ : ಸಿಎಎ ವಿರುದ್ಧ ಎಸ್ಡಿಪಿಐ ಪ್ರತಿಭಟನೆ
SჄS 30 ನೇ ವಾರ್ಷಿಕ ಸಮ್ಮೇಳನ ದ ಪ್ರಚಾರ: SჄS ಬೆಳ್ತಂಗಡಿ ಝೋನ್ ‘ENARGIZE-2K24’ ಯಶಸ್ವಿ
ಹತ್ಯೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಬೇಕು- ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ದ ಕ ಜಿಲ್ಲೆ: 75ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ
ಗುರುವಾಯನಕೆರೆ: “ಗಣರಾಜ್ಯ ರಕ್ಷಿಸಿ” ಅಭಿಯಾನದ ಆಝಾದಿ ಎಕ್ಸ್’ಪೋ ಯಶಸ್ವಿ
ಗುರುವಾಯನಕೆರೆ: ಅಜಾದಿ ಎಕ್ಸ್’ ಪೋ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್: ಕ್ಯಾಂಪಸ್ ಅಸ್ಸೆಂಬ್ಲಿ ಸ್ಲೋಗನ್ ಸ್ಟಡಿ ಕ್ಲಾಸ್
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ- ನೂತನ ಪದಾಧಿಕಾರಿಗಳು
ಬೆಳ್ತಂಗಡಿ: ಮುಸ್ಲಿಂ ಮುಖಂಡ ಹೈದರ್ ನೀರ್ಸಾಲ್ ನಿಧನ