ಹೊಸದಿಲ್ಲಿ: ಆ್ಯಂಡ್ರಾಯ್ಡ ಫೋನ್ ಗ್ರಾಹಕರೇ ಎಚ್ಚರಿಕೆಯಿಂದ ಇರಿ. ಆದಾಯ ತೆರಿಗೆ ರೀ ಫಂಡ್ ಮಾಡಿಕೊಡಲಾಗುತ್ತದೆ ಎಂಬ ಆಕರ್ಷಕ ಸಂದೇಶದ ಲಿಂಕ್ ಇರುವ ಟ್ರೋಜನ್ ಮಾಲ್ವೇರ್ ದೇಶದ ಬ್ಯಾಂಕ್ಗಳ ಗ್ರಾಹಕರಿಗೆ ಬರುತ್ತಿದೆ.
ಈಗಾಗಲೇ ಸರಕಾರಿ ಮತ್ತು ಖಾಸಗಿ ಸ್ವಾಮ್ಯದ 27ಬ್ಯಾಂಕ್ಗಳ ಗ್ರಾಹಕರಿಗೆ ಇಂಥ ಸಂದೇಶ ರವಾನೆಯಾಗಿದೆ ಎಂದು ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ಮಂಗಳವಾರ ಈ ಎಚ್ಚರಿಕೆ ನೀಡಿದೆ.
ಆದಾಯ ತೆರಿಗೆ ರೀ ಫಂಡ್ ಮಾಡಲಾಗುತ್ತದೆ ಎಂಬ ಆಮಿಷವಿರುವ ಸಂದೇಶ ಲಿಂಕ್ ಮೊಬೈಲ್ಗೆ ಬರುತ್ತದೆ. ಅದನ್ನು ಓಪನ್ ಮಾಡಿದಾಗ ಗ್ರಾಹಕರ ಖಾಸಗಿ ಮಾಹಿತಿಗೆ ಧಕ್ಕೆಯಾಗಲಿದೆ ಎಂದು ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ.
ಈ ಮಾಲ್ವೇರ್ಗೆ “ಡ್ರಿನಿಕ್’ ಎಂದು ಹೆಸರಿಸಲಾಗಿದ್ದು, 2016ರಿಂದಲೇ ಅದು ಕಾರ್ಯಾಚರಿಸುತ್ತಿತ್ತು. ಇತ್ತೀಚಿನ ದಿನಗಳಲ್ಲಿ ಆ್ಯಂಡ್ರಾಯ್ಡ ತಂತ್ರಜ್ಞಾನ ಇರುವ ಮೊಬೈಲ್ಗಳ ಗ್ರಾಹಕರನ್ನು ಗುರಿಯಾಗಿರಿಸಿಕೊಂಡು ಸಂದೇಶ ರವಾನೆಯಾಗುತ್ತಿದೆ ಎಂದು ಸರಕಾರದ ತಂಡ ತಿಳಿಸಿದೆ.
ರೀ ಫಂಡ್ ಹೆಸರಿನಲ್ಲಿ ಬರುವ ಲಿಂಕ್ ಆ್ಯಪ್ ಡೌನ್ಲೋಡ್ ಮಾಡಲು ಸೂಚಿಸುತ್ತದೆ. ಎಸ್ಎಂಎಸ್, ಕಾಲ್ ಲಾಗ್, ಕಾಂಟಾಕ್ಟ್ಸ್ ಸೇರಿದಂತೆ ಹಲವು ವಿಭಾಗಗಳ ಪ್ರವೇಶಕ್ಕೆ ಅನುಮತಿ ಕೇಳುತ್ತದೆ. ಅದಕ್ಕೆ ಅವಕಾಶ ನೀಡಕೂಡದು ಎಂದು ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ.
ಅಂಥ ಸಮಸ್ಯೆಗಳು ಕಂಡುಬಂದಲ್ಲಿ incident@cert-in.org.in ಗೆ ಇ-ಮೇಲ್ ಮೂಲಕ ದೂರು ಸಲ್ಲಿಸಲು ಅವಕಾಶ ಇದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ