ಬೆಂಗಳೂರು: ಅಕ್ಟೋಬರ್ 1 ರಿಂದ ಚಿತ್ರಮಂದಿರ. ಅಕ್ಟೋಬರ್ 3 ರಿಂದ ಶಾಲಾ-ಕಾಲೇಜು ಸೇರಿ ಪಬ್ ಗಳಿಗೂ ಶೇಕಡ ನೂರರಷ್ಟು ಹಾಜರಾತಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿ ಕೆಲವು ನಿಯಮಗಳನ್ನು ಸೂಚಿಸಿದೆ.
ಶೇ.1 ಕ್ಕಿಂತ ಕಡಿಮೆ ಕೋವಿಡ್ ಪ್ರಕರಣವಿರುವ ಭಾಗಗಳಲ್ಲಿ ಮಾತ್ರ ಶೇ.100 ರಷ್ಟು ಚಿತ್ರಮಂದಿರ ತುಂಬಲು ಅವಕಾಶ ಕಲ್ಪಿಸಿದ್ದು, ಶೇ.1 ಕ್ಕಿಂತ ಪ್ರಕರಣ ಹೆಚ್ಚಿರುವ ಕಡೆ ಶೇ.50 ಹಾಗೂ ಶೇ.2 ಕ್ಕಿಂತ ಕೋವಿಡ್ ಪ್ರಕರಣ ಹೆಚ್ಚಿರುವ ಭಾಗಗಳಲ್ಲಿ ಚಿತ್ರಮಂದಿರ ಬಂದ್ ಮಾಡುವುದಾಗಿಯೂ ಹಾಗೂಚಿತ್ರಮಂದಿರದಲ್ಲಿ ಚಿತ್ರ ವೀಕ್ಷಿಸುವವರು ಕೋವಿಡ್ ಮೊದಲನೇ ಲಸಿಕೆಯನ್ನಾದರೂ ಕಡ್ಡಾಯವಾಗಿ ಪಡೆದಿರಬೇಕೆಂದು ಷರತ್ತು ವಿಧಿಸಿದೆ.ಗರ್ಭಿಣಿ ಹಾಗೂ ಮಕ್ಕಳಿಗೆ ಚಿತ್ರಮಂದಿರದಲ್ಲಿ ಅವಕಾಶ ನೀಡದಿರಲು ನಿರ್ಧರಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲಿನ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿಂದು ಉನ್ನತ ಮಟ್ಟದ ತಜ್ಞರ ಸಮಿತಿ ಸಭೆ ನಡೆಯಿತು.
ಸಭೆಯಲ್ಲಿ ರಾಜ್ಯದಲ್ಲಿ ಪ್ರಸ್ತುತ ಸರಾಸರಿ ಕೋವಿಡ್ ಪ್ರಕರಣಗಳು ಶೇ.0.66 ಬಗ್ಗೆ ಸಂಬಂಧಿಸಿದವರಿಂದ ಸಿಎಂ ಮಾಹಿತಿ ಪಡೆದರು.ರಾತ್ರಿ ಕರ್ಫ್ಯೂವನ್ನು ರಾತ್ರಿ 1- ರಿಂದ ಬೆಳಿಗ್ಗೆ 5ರವರೆಗೆ ನಿಗದಿ ಪಡಿಸಿ, 6-12 ನೇ ತರಗತಿವರೆಗೆ ಶೇ.100 ರಷ್ಟು ಹಾಜರಾತಿಯಂತೆ ವಾರದಲ್ಲಿ 5 ದಿನ ಶಾಲಾ ಕಾಲೇಜು ನಡೆಸಲು ತೀರ್ಮಾನಿಸಲಾಯಿತು.
ದಸರಾ ಬಗ್ಗೆ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲು, ಗಡಿಭಾಗಗಳಲ್ಲಿ ಹೆಚ್ಚು ನಿಗಾ, ಯಾದಗಿರಿ, ರಾಯಚೂರು, ಕಲಬುರಗಿ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಲಸಿಕಾ ಅಭಿಯಾನ ತೀವ್ರಗೊಳಿಸಲು ಜನರಲ್ಲಿ ಲಸಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲು ಸಭೆಯಲ್ಲಿ ಸೂಚಿಸಲಾಯಿತು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಅಕ್ಟೋಬರ್ 3 ರಿಂದ ಪಬ್ ಗಳಿಗೆ ಅನುಮತಿ ನೀಡಲು ಹಾಗೂ 1-5 ಶಾಲೆಗಳನ್ನು ಸದ್ಯಕ್ಕೆ ತೆರೆಯದಿರಲು ನಿರ್ಧರಿಸುವುದಾಗಿ ಹೇಳಿದರು.
ಸಭೆಯಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ, ಕಂದಾಯ ಸಚಿವ ಆರ್ ಅಶೋಕ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ