ಬೆಂಗಳೂರು: ಅಕ್ಟೋಬರ್ 1 ರಿಂದ ಚಿತ್ರಮಂದಿರ. ಅಕ್ಟೋಬರ್ 3 ರಿಂದ ಶಾಲಾ-ಕಾಲೇಜು ಸೇರಿ ಪಬ್ ಗಳಿಗೂ ಶೇಕಡ ನೂರರಷ್ಟು ಹಾಜರಾತಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿ ಕೆಲವು ನಿಯಮಗಳನ್ನು ಸೂಚಿಸಿದೆ.
ಶೇ.1 ಕ್ಕಿಂತ ಕಡಿಮೆ ಕೋವಿಡ್ ಪ್ರಕರಣವಿರುವ ಭಾಗಗಳಲ್ಲಿ ಮಾತ್ರ ಶೇ.100 ರಷ್ಟು ಚಿತ್ರಮಂದಿರ ತುಂಬಲು ಅವಕಾಶ ಕಲ್ಪಿಸಿದ್ದು, ಶೇ.1 ಕ್ಕಿಂತ ಪ್ರಕರಣ ಹೆಚ್ಚಿರುವ ಕಡೆ ಶೇ.50 ಹಾಗೂ ಶೇ.2 ಕ್ಕಿಂತ ಕೋವಿಡ್ ಪ್ರಕರಣ ಹೆಚ್ಚಿರುವ ಭಾಗಗಳಲ್ಲಿ ಚಿತ್ರಮಂದಿರ ಬಂದ್ ಮಾಡುವುದಾಗಿಯೂ ಹಾಗೂಚಿತ್ರಮಂದಿರದಲ್ಲಿ ಚಿತ್ರ ವೀಕ್ಷಿಸುವವರು ಕೋವಿಡ್ ಮೊದಲನೇ ಲಸಿಕೆಯನ್ನಾದರೂ ಕಡ್ಡಾಯವಾಗಿ ಪಡೆದಿರಬೇಕೆಂದು ಷರತ್ತು ವಿಧಿಸಿದೆ.ಗರ್ಭಿಣಿ ಹಾಗೂ ಮಕ್ಕಳಿಗೆ ಚಿತ್ರಮಂದಿರದಲ್ಲಿ ಅವಕಾಶ ನೀಡದಿರಲು ನಿರ್ಧರಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ರಾಜ್ಯದಲ್ಲಿನ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿಂದು ಉನ್ನತ ಮಟ್ಟದ ತಜ್ಞರ ಸಮಿತಿ ಸಭೆ ನಡೆಯಿತು.
ಸಭೆಯಲ್ಲಿ ರಾಜ್ಯದಲ್ಲಿ ಪ್ರಸ್ತುತ ಸರಾಸರಿ ಕೋವಿಡ್ ಪ್ರಕರಣಗಳು ಶೇ.0.66 ಬಗ್ಗೆ ಸಂಬಂಧಿಸಿದವರಿಂದ ಸಿಎಂ ಮಾಹಿತಿ ಪಡೆದರು.ರಾತ್ರಿ ಕರ್ಫ್ಯೂವನ್ನು ರಾತ್ರಿ 1- ರಿಂದ ಬೆಳಿಗ್ಗೆ 5ರವರೆಗೆ ನಿಗದಿ ಪಡಿಸಿ, 6-12 ನೇ ತರಗತಿವರೆಗೆ ಶೇ.100 ರಷ್ಟು ಹಾಜರಾತಿಯಂತೆ ವಾರದಲ್ಲಿ 5 ದಿನ ಶಾಲಾ ಕಾಲೇಜು ನಡೆಸಲು ತೀರ್ಮಾನಿಸಲಾಯಿತು.
ದಸರಾ ಬಗ್ಗೆ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲು, ಗಡಿಭಾಗಗಳಲ್ಲಿ ಹೆಚ್ಚು ನಿಗಾ, ಯಾದಗಿರಿ, ರಾಯಚೂರು, ಕಲಬುರಗಿ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಲಸಿಕಾ ಅಭಿಯಾನ ತೀವ್ರಗೊಳಿಸಲು ಜನರಲ್ಲಿ ಲಸಿಕೆ ಬಗ್ಗೆ ಹೆಚ್ಚು ಅರಿವು ಮೂಡಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲು ಸಭೆಯಲ್ಲಿ ಸೂಚಿಸಲಾಯಿತು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಅಕ್ಟೋಬರ್ 3 ರಿಂದ ಪಬ್ ಗಳಿಗೆ ಅನುಮತಿ ನೀಡಲು ಹಾಗೂ 1-5 ಶಾಲೆಗಳನ್ನು ಸದ್ಯಕ್ಕೆ ತೆರೆಯದಿರಲು ನಿರ್ಧರಿಸುವುದಾಗಿ ಹೇಳಿದರು.
ಸಭೆಯಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ, ಕಂದಾಯ ಸಚಿವ ಆರ್ ಅಶೋಕ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ