ಮಂಗಳೂರು: ಹೊಸ ಅಮಾನವೀಯ ಕಾನೂನುಗಳ ಮೂಲಕ ನಾಗರಿಕರನ್ನು ಸ್ವಂತ ನೆಲದಿಂದ ಹೊರಹಾಕುವ ನೆಪ ಒಡ್ಡಿ ಅನ್ಯಾಯವಾಗಿ ದೌರ್ಜನ್ಯಗಳ ಮೂಲಕ ಮಾನವ ಹಕ್ಕುಗಳನ್ನು ದಮನಿಸುವುದನ್ನು ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಸೆಸ್ಸೆಫ್) ಖಂಡಿಸುತ್ತದೆ ಎಂದು ಸಂಘಟನೆಯ ಅಧ್ಯಕ್ಷ ಅಬ್ದುಲ್ ಲತೀಫ್ ಸ’ಅದಿ ಶಿವಮೊಗ್ಗ ರವರು ಹೇಳಿದರು.ಮಂಗಳೂರಿನ ಸಮೀಪದ ಮಿತ್ತೂರಿನಲ್ಲಿ ನಡೆದ ರಾಜ್ಯ ಸೆಕ್ರೆಟರಿಯೇಟ್ ಸಭೆಯಲ್ಲಿ ಈ ಖಂಡನೆಯನ್ನು ನೀಡಲಾಯಿತು.
ಯಾವುದೇ ಕಾರಣವಿಲ್ಲದೆ ಮುಸ್ಲಿಮರೆಂಬ ಏಕೈಕ ಕಾರಣದಿಂದ ಅಸ್ಸಾಮಿನ ಸರಕಾರವು ಮಿಲಿಟರಿ ಮತ್ತು ಪೋಲಿಸ್ ಪಡೆಯ ಮೂಲಕ ಅಮಾಯಕರನ್ನು ಹಿಂಸಿಸುತ್ತಿದ್ದು ಸುಮಾರು 800 ಕ್ಕೂ ಮಿಕ್ಕ ಕುಟುಂಬಗಳು ದೌರ್ಜನ್ಯಕ್ಕೀಡಾಗುತ್ತಿದೆ. ಕೂಡಲೇ ಈ ಹಿಂಸೆಯನ್ನು ಕೊನೆಗಾಣಿಸಿ ಭಾರತೀಯರಿಗೆ ರಕ್ಷಣೆಯನ್ನು ನೀಡಬೇಕು ಎಂದು ಅಸ್ಸಾಂ ಸರಕಾರ ಹಾಗೂ ಕೇಂದ್ರ ಸರಕಾರಕ್ಕೆ ಒತ್ತಾಯ ಮಾಡಿತು. ಇಲ್ಲವಾದಲ್ಲಿ ಸೂಕ್ತ ಕಾನೂನು ಹೋರಾಟವನ್ನು ನಡೆಸಲಾಗುವುದು ಎಂದು ಪ್ರ.ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ