ಭಾರತೀಯ ಮಾಧ್ಯಮಗಳು ಅಮೆರಿಕನ್ ಪತ್ರಿಕೆಗಳಿಗಿಂತ ಉತ್ತಮ ನಡವಳಿಕೆ ಹೊಂದಿದೆ ಎಂದು ಅಮೆರಿಕಾ ಅಧ್ಯಕ್ಷ ಜೋ ಬಿಡೆನ್, ಪ್ರಧಾನಿ ಮೋದಿ ಅವರಿಗೆ ಶುಕ್ರವಾರ ಹೇಳಿದ್ದಾರೆ. ಮೂರು ದಿನಗಳ ಪ್ರವಾಸಕ್ಕೆ ಅಮೆರಿಕಾ ತಲುಪಿದ್ದ ಪ್ರಧಾನಿ ಮೋದಿಯೊಂದಿಗೆ ದ್ವಿಪಕ್ಷೀಯ ಮಾತುಕತೆಗೆ ಕುಳಿತುಕೊಳ್ಳುತ್ತಿರುವಾಗ ಅವರು ಇದನ್ನು ಹೇಳಿದ್ದಾರೆ.
ಬಿಡೆನ್ ಅವರು ದೇಶದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತದೊಂದಿಗೆ ನಡೆಸುತ್ತಿರುವ ಮೊದಲ ದ್ವಿಪಕ್ಷೀಯ ಮಾತುಕತೆಯನ್ನು ಶ್ವೇತಭವನದ ಓವಲ್ ಕಚೇರಿಯಲ್ಲಿ ನಿನ್ನೆ ಆಯೋಜಿಸಲಾಗಿತ್ತು.
ಮಾತುಕತೆಗೆ ಶುರು ಮಾಡುವುದಕ್ಕಿಂತ ಮುಂಚೆಯೆ ಶುಭಾಶಯ ವಿನಿಮಯ ಮಾಡಿಕೊಂಡ ಬಿಡನ್, “ಭಾರತೀಯ ಮಾಧ್ಯಮಗಳು ಅಮೆರಿಕನ್ ಪತ್ರಿಕೆಗಳಿಗಿಂತ ಉತ್ತಮವಾಗಿ ನಡೆದುಕೊಳ್ಳುತ್ತವೆ. ನಿಮ್ಮ ಅನುಮತಿಯೊಂದಿಗೆ ಹೇಳುವುದಾದರೆ… ನೀವು ಅವರಿಗೆ(ಮಾಧ್ಯಮ) ಉತ್ತರಿಸುವ ಅಗತ್ಯವೆ ಇರುವುದಿಲ್ಲ, ಯಾಕೆಂದರೆ ಅವರು ನಿಮಗೆ ಪ್ರಶ್ನೆಯೆ ಕೇಳುವುದಿಲ್ಲ” ಎಂದು ಹೇಳಿದ್ದಾರೆ.
ಬಿಡೆನ್ ಅವರ ಈ ಮಾತನ್ನು ಪ್ರಧಾನಿ ಮೋದಿ ಅವರು ‘ಸಂಪೂರ್ಣವಾಗಿ ಒಪ್ಪಿಕೊಂಡರು’ ಎಂದು ಪಿಟಿಐ ಮತ್ತು ಎಎನ್ಐ ವರದಿ ಮಾಡಿದೆ.
ಪ್ರಧಾನಿ ಮೋದಿ ಅಧಿಕಾರಕ್ಕೆ ಏರಿದ ನಂತರ ದೇಶದ ಪತ್ರಿಕಾ ಸ್ವಾತಂತ್ರ್ಯದ ಸೂಚ್ಯಾಂಕ ಇಳಿಯುತ್ತಿರುವುದನ್ನು ಇಲ್ಲಿ ಗಮನಿಸಬಹುದಾಗಿದೆ. ಅಲ್ಲದೆ, 2014 ರಲ್ಲಿ ಮೋದಿ ಅಧಿಕಾರಕ್ಕೆ ಬಂದಾಗಿನಿಂದ 2019 ರಲ್ಲಿ ಒಂದೇ ಒಂದು ಪತ್ರಿಕಾಗೋಷ್ಠಿಯನ್ನು ನಡೆಸಿದ್ದಾರೆ. ಆದರೆ ಆ ಪತ್ರಿಕಾಗೋಷ್ಠಿಯಲ್ಲೂ ಅವರು ಪ್ರಶ್ನೆಗಳಿಗೆ ಉತ್ತರಿಸಿಲ್ಲ.
ಡೊನಾಲ್ಡ್ ಟ್ರಂಪ್ ಅವರು ಕೂಡಾ 2019 ರಲ್ಲಿ ಭಾರತೀಯ ಪತ್ರಕರ್ತನನ್ನು ಉಲ್ಲೇಖಿಸಿ, ಭಾರತದಲ್ಲಿ ‘ಉತ್ತಮ ವರದಿಗಾರರು ಇದ್ದಾರೆ’ ಎಂದು ಹೇಳಿದ್ದರು
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ