ಕುವೈತ್ನಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಕೆಲಸದ ಪರವಾನಗಿಯನ್ನು ನವೀಕರಿಸದಿರುವ ನಿರ್ಧಾರವು ಹೊಸಬರಿಗೆ ಮಾತ್ರ ಅನ್ವಯಿಸುವಂತೆ ಬೇಡಿಕೆ. ಕುವೈಟ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಸರ್ಕಾರಕ್ಕೆ ಇಂತಹ ವಿನಂತಿಯನ್ನು ಮಾಡಿದೆ.
ಪ್ರಧಾನಿಗೆ ಬರೆದ ಪತ್ರದಲ್ಲಿ, ಚೇಂಬರ್ ಆಫ್ ಕಾಮರ್ಸ್ ಈ ನಿಬಂಧನೆಯು ದೇಶದಲ್ಲಿ ವರ್ಷಗಳ ಕಾಲ ಕೆಲಸ ಮಾಡುತ್ತಿರುವ ವಿದೇಶಿಯರಿಗೆ ಅನ್ವಯಿಸಬಾರದು ಎಂದು ವಿನಂತಿಸಿದೆ. ವಿವಿಧ ಕ್ಷೇತ್ರಗಳಲ್ಲಿ ವರ್ಷಗಳ ಅನುಭವ ಹೊಂದಿರುವ ವಲಸಿಗರ ಸೇವೆಗಳನ್ನು ಕೊನೆಗೊಳಿಸಬೇಕಾಗಿರುವುದು ಕಾರ್ಮಿಕ ಮಾರುಕಟ್ಟೆಗೆ ಭಾರೀ ನಷ್ಟವಾಗಲಿದೆ ಮತ್ತು ಕಾರ್ಮಿಕರ ಸೇವೆಯನ್ನು ಕಡೆಗಣಿಸಲಾಗದು ಎಂದು ಚೇಂಬರ್ ಗಮನಸೆಳೆದಿದೆ.
60 ವರ್ಷಕ್ಕಿಂತ ಮೇಲ್ಪಟ್ಟ ಪದವೀಧರರಲ್ಲದ ವಿದೇಶಿಯರ ರೆಸಿಡೆನ್ಸಿಯನ್ನು ನವೀಕರಿಸಲು ಭಾರೀ ಶುಲ್ಕ ಈಡು ಮಾಡುವ ಕ್ರಮದ ವಿರುದ್ಧ ಸಂಸತ್ತಿನ ಸದಸ್ಯರು ಕೂಡಾ ಮುಂದೆ ಬಂದಿದ್ದಾರೆ. ಸಂಸದರಾದ ಅದ್ನಾನ್ ಅಬ್ದುಲ್ ಸಮದ್ ಮತ್ತು ಡಾ.ಮತ್ತಾರ್ ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಳೆದ ಜನವರಿಯಲ್ಲಿ, ಕೌಶಲ್ಯರಹಿತ ಕಾರ್ಮಿಕರನ್ನು ಕಡಿಮೆ ಮಾಡುವ ಮೂಲಕ ದೇಶದಲ್ಲಿ ಜನಸಂಖ್ಯಾ ಸಮತೋಲನ ಸಾಧಿಸುವ ಉದ್ದೇಶದಿಂದ ಮಾನವಶಕ್ತಿ ಪ್ರಾಧಿಕಾರವು ವಯಸ್ಸಿನ ಮಿತಿಯನ್ನು ಮುಂದಿಟ್ಟಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ