ಕುವೈತ್ನಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಕೆಲಸದ ಪರವಾನಗಿಯನ್ನು ನವೀಕರಿಸದಿರುವ ನಿರ್ಧಾರವು ಹೊಸಬರಿಗೆ ಮಾತ್ರ ಅನ್ವಯಿಸುವಂತೆ ಬೇಡಿಕೆ. ಕುವೈಟ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಸರ್ಕಾರಕ್ಕೆ ಇಂತಹ ವಿನಂತಿಯನ್ನು ಮಾಡಿದೆ.
ಪ್ರಧಾನಿಗೆ ಬರೆದ ಪತ್ರದಲ್ಲಿ, ಚೇಂಬರ್ ಆಫ್ ಕಾಮರ್ಸ್ ಈ ನಿಬಂಧನೆಯು ದೇಶದಲ್ಲಿ ವರ್ಷಗಳ ಕಾಲ ಕೆಲಸ ಮಾಡುತ್ತಿರುವ ವಿದೇಶಿಯರಿಗೆ ಅನ್ವಯಿಸಬಾರದು ಎಂದು ವಿನಂತಿಸಿದೆ. ವಿವಿಧ ಕ್ಷೇತ್ರಗಳಲ್ಲಿ ವರ್ಷಗಳ ಅನುಭವ ಹೊಂದಿರುವ ವಲಸಿಗರ ಸೇವೆಗಳನ್ನು ಕೊನೆಗೊಳಿಸಬೇಕಾಗಿರುವುದು ಕಾರ್ಮಿಕ ಮಾರುಕಟ್ಟೆಗೆ ಭಾರೀ ನಷ್ಟವಾಗಲಿದೆ ಮತ್ತು ಕಾರ್ಮಿಕರ ಸೇವೆಯನ್ನು ಕಡೆಗಣಿಸಲಾಗದು ಎಂದು ಚೇಂಬರ್ ಗಮನಸೆಳೆದಿದೆ.
60 ವರ್ಷಕ್ಕಿಂತ ಮೇಲ್ಪಟ್ಟ ಪದವೀಧರರಲ್ಲದ ವಿದೇಶಿಯರ ರೆಸಿಡೆನ್ಸಿಯನ್ನು ನವೀಕರಿಸಲು ಭಾರೀ ಶುಲ್ಕ ಈಡು ಮಾಡುವ ಕ್ರಮದ ವಿರುದ್ಧ ಸಂಸತ್ತಿನ ಸದಸ್ಯರು ಕೂಡಾ ಮುಂದೆ ಬಂದಿದ್ದಾರೆ. ಸಂಸದರಾದ ಅದ್ನಾನ್ ಅಬ್ದುಲ್ ಸಮದ್ ಮತ್ತು ಡಾ.ಮತ್ತಾರ್ ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕಳೆದ ಜನವರಿಯಲ್ಲಿ, ಕೌಶಲ್ಯರಹಿತ ಕಾರ್ಮಿಕರನ್ನು ಕಡಿಮೆ ಮಾಡುವ ಮೂಲಕ ದೇಶದಲ್ಲಿ ಜನಸಂಖ್ಯಾ ಸಮತೋಲನ ಸಾಧಿಸುವ ಉದ್ದೇಶದಿಂದ ಮಾನವಶಕ್ತಿ ಪ್ರಾಧಿಕಾರವು ವಯಸ್ಸಿನ ಮಿತಿಯನ್ನು ಮುಂದಿಟ್ಟಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ