ವಿಟ್ಲ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಎಸ್ಸೆಸ್ಸೆಫ್ ವತಿಯಿಂದ ಎರಡು ವರ್ಷಕ್ಕೊಮ್ಮೆ ನಡೆಸುವ ಪ್ರತಿಭಾನ್ವೇಷಣೆ ಕಾರ್ಯಕ್ರಮ ಪ್ರತಿಭೋತ್ಸವ ಇದೇ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ರಾಜ್ಯದಾದ್ಯಂತ ನಡೆಯಲಿದೆ.ಇದರ ವಿಟ್ಲ ಡಿವಿಷನ್ ಮಟ್ಟದ ನಿರ್ವಹಣಾ ಸಮಿತಿಯನ್ನು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಪ್ರತಿಭೋತ್ಸವ ಸಮಿತಿ ಚೇರ್ಮನ್ ಫೈಝಲ್ ಝುಹುರಿ ಕಲ್ಲುಗುಂಡಿ ಘೋಷಣೆ ಮಾಡಿದರು.
ಚೇರ್ಮನ್ ಆಗಿ ಹಸನ್ ಸಅದಿ ಕುಕ್ಕಿಲ, ವೈಸ್ ಚೇರ್ಮನ್ ಆಗಿ ಹಾರಿಸ್ ಹಿಮಮಿ ಪೆರುವಾಯಿ ಹಾಗೂ ಗಫೂರ್ ಕಂಬಳಬೆಟ್ಟು, ಕನ್ವೀನರ್ ಆಗಿ ಅಶ್ಫಾಕ್ ಕೊಡಂಗಾಯಿ, ವೈಸ್ ಕನ್ವೀನರ್ ಆಗಿ ಆರಿಫ್ ಕೊಂಬರಬೆಟ್ಟು ಹಾಗೂ ಇಬ್ರಾಹಿಂ ಕೋಡಪದವು, ಫೈನಾನ್ಸಿಯಲ್ ಕಾರ್ಯದರ್ಶಿ ಆಗಿ ಹಕೀಂ ಮುಸ್ಲಿಯಾರ್ ನೆಲ್ಲಿಗುಡ್ಡೆ ಸೇರಿದಂತೆ ಡಿವಿಷನ್ ಸಮಿತಿಯ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹಾಗೂ ಕೋಶಾಧಿಕಾರಿ ಅವರನ್ನೊಳಗೊಂಡ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಎಸ್ಸೆಸ್ಸೆಫ್ ದ.ಕ ಜಿಲ್ಲೆ (ಈಸ್ಟ್) ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಅಲಿ ತುರ್ಕಳಿಕೆ ಶುಭಹಾರೈಸಿದರು.
ವಿ.ಎಂ ಅಬೂಬಕ್ಕರ್ ಹಿಮಮಿ ಸಖಾಫಿ ಯವರ ಅಧ್ಯಕ್ಷತೆ ಯಲ್ಲಿ ನಡೆದ ಸಭೆಯಲ್ಲಿ, ಕೋಶಾಧಿಕಾರಿ ಜಂಶಾದ್ ಕಂಬಳಬೆಟ್ಟು ಉಪಸ್ಥಿತರಿದ್ದರು. ಡಿವಿಷನ್ ಪ್ರಧಾನ ಕಾರ್ಯದರ್ಶಿ ಜಹಾಝ್ ಅಳಿಕೆ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ