ನವದೆಹಲಿ: ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಕೇಂದ್ರ ಸರ್ಕಾರದ ಹರಸಾಹಸಕ್ಕೆ ಕೊನೆಗೂ ಮುಕ್ತಿ ದೊರೆತಿದ್ದು, ಟಾಟಾ ಸಮೂಹ ಹರಾಜಿನಲ್ಲಿ ಏರ್ ಇಂಡಿಯಾವನ್ನು ಖರೀದಿ ಮಾಡಿದೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿದೆ.
ಇಂದು ಭಾರತೀಯ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯ ಖರೀದಿ ಸಂಬಂಧ ಬಿಡ್ ನಡೆಸಲಾಗಿದ್ದು,ಈ ಬಿಡ್ ನಲ್ಲಿ ವಿವಿಧ ಸಂಸ್ಥೆಗಳು ಪಾಲ್ಗೊಂಡಿದ್ದವು. ಅಂತಿಮವಾಗಿ ಏರ್ ಇಂಡಿಯಾ ಸಂಸ್ಥೆಯನ್ನು ಟಾಟಾ ಸನ್ಸ್ ಸಂಸ್ಥೆ ಖರೀದಿಸುವಲ್ಲಿ ಸಫಲವಾಗಿದೆ ಎಂದು ಬ್ಲೂಮರ್ಗ್ ವರದಿ ಮಾಡಿದೆ.ಈ ಬಗ್ಗೆ ಸುದ್ದಿಸಂಸ್ಥೆಗಳು ವರದಿ ಮಾಡಿದ್ದು, ಏರ್ ಇಂಡಿಯಾ ಸಂಸ್ಥೆಯನ್ನು ಟಾಟಾ ಸನ್ಸ್ ಸಂಸ್ಥೆ ಬಹುದೊಡ್ಡ ಮೊತ್ತ ನೀಡಿ ಖರೀದಿ ಮಾಡಿದೆ ಎನ್ನಲಾಗಿದೆ.
ಆದರೆ ಈ ವರದಿಯನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ. ಏರ್ ಇಂಡಿಯಾ ಮಾರಾಟ ಸಂಬಂಧಿತ ವಿವರಗಳನ್ನು ಮತ್ತೆ ಪ್ರಕಟಿಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಹಳೆಯ ಮಾಲೀಕನನ್ನೇ ಸೇರಿದ ಏರ್ ಇಂಡಿಯಾ
ಇನ್ನು ಏರ್ ಇಂಡಿಯಾ ಈ ಹಿಂದೆ ಟಾಟಾ ಗ್ರೂಪ್ ನದ್ದೇ ಕಂಪನಿಯಾಗಿತ್ತು. ಈ ಕಂಪನಿಯನ್ನು ಜೆಆರ್ ಡಿ ಟಾಟಾ 1932 ರಲ್ಲಿ ಸ್ಥಾಪಿಸಿದ್ದರು. ಸ್ವಾತಂತ್ರ್ಯಾನಂತರ, ವಾಯುಯಾನ ವಲಯವನ್ನು ರಾಷ್ಟ್ರೀಕರಣಗೊಳಿಸಲಾಯಿತು ಮತ್ತು ಸರ್ಕಾರವು ಟಾಟಾ ಏರ್ ಲೈನ್ಸ್ ಷೇರುಗಳಲ್ಲಿ ಶೇಕಡಾ 49 ರಷ್ಟನ್ನು ಖರೀದಿಸಿತು. ನಂತರ ಕಂಪನಿಯು ಸಾರ್ವಜನಿಕ ಸೀಮಿತ ಕಂಪನಿಯಾಯಿತು ಮತ್ತು ಜುಲೈ 29, 1946 ರಂದು ಏರ್ ಇಂಡಿಯಾ ಎಂದು ಮರುನಾಮಕರಣ ಮಾಡಲಾಯಿತು.
1953 ರಲ್ಲಿ, ಸರ್ಕಾರವು ಏರ್ ಕಾರ್ಪೊರೇಷನ್ ಕಾಯ್ದೆಯನ್ನು ಅಂಗೀಕರಿಸಿತು ಮತ್ತು ಕಂಪನಿಯ ಸ್ಥಾಪಕ ಜೆಆರ್ ಡಿ ಟಾಟಾ ಅವರಿಂದ ಮಾಲೀಕತ್ವದ ಹಕ್ಕುಗಳನ್ನು ಖರೀದಿಸಿತು. ನಂತರ ಈ ಕಂಪನಿಯನ್ನು ಏರ್ ಇಂಡಿಯಾ ಇಂಟರ್ ನ್ಯಾಷನಲ್ ಲಿಮಿಟೆಡ್ ಎಂದು ಮರುನಾಮಕರಣ ಮಾಡಲಾಯಿತು. ಹೀಗಾಗಿ ಟಾಟಾ ಗ್ರೂಪ್ 68 ವರ್ಷಗಳ ನಂತರ ಮತ್ತೊಮ್ಮೆ ತನ್ನ ಸ್ವಂತ ಕಂಪನಿಯನ್ನು ಹಿಂತೆಗೆದುಕೊಂಡಂತಾಗಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ