ಲಕ್ನೋ, ಅ.04; ಭಾನುವಾರ ಉತ್ತರಪ್ರದೇಶದ ಲಖೀಮ್ಪುರ್ Lakhimpur ನಲ್ಲಿ ನಡೆದ ಹಿಂಸಾಚಾರದಲ್ಲಿ 4 ಜನ ರೈತರು ಸೇರಿದಂತೆ ಒಟ್ಟು 8 ಜನ ಮೃತಪಟ್ಟಿದ್ದರು. ಆದರೆ, ನಿನ್ನೆ ಘಟನೆಯ ನಂತರ ಕಾಣೆಯಾಗಿದ್ದ ಸ್ಥಳೀಯ ಪತ್ರಕರ್ತನೊಬ್ಬ ಇಂದು ಮೃತಪಟ್ಟಿರುವುದು ಧೃಡವಾಗಿದ್ದು, ಸಾವಿನ ಸಂಖ್ಯೆ 9ಕ್ಕೆ ಏರಿದೆ.
ಈ ನಡುವೆ ಇಂದು ಮುಂಜಾನೆ ಮೃತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ಆಗಮಿಸಿದ್ದ ಪ್ರಿಯಾಂಕ ಗಾಂಧಿಯನ್ನು ಬಂಧಿಸಿ, ಮುನ್ನೆಚ್ಚರಿಕಾ ಕ್ರಮವಾಗಿ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರನ್ನು ಗೃಹ ಬಂಧನಕ್ಕೆ ಒಳಪಡಿಸಲಾಗಿತ್ತು. ಆದರೆ, ಅಖಿಲೇಶ್ ಯಾದವ್ ಘಟನೆಯನ್ನು ಖಂಡಿಸಿ ರಸ್ತೆಗಿಳಿದು ಹೋರಾಟ ನಡೆಸಿದ ಪರಿಣಾಮ ಇದೀಗ ಅವರನ್ನೂ ಸಹ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸಚಿವ ಅಜಯ್ ಮಿಶ್ರಾ ಮತ್ತು ಡಿಸಿಎಂ ಕೇಶವ ಪ್ರಸಾದ್ ಮೌರ್ಯ ನಿನ್ನೆ ಉತ್ತರ ಪ್ರದೇಶದ ಲಖೀಮ್ಪುರ್ಗೆ ಆಗಮಿಸಿದ್ದರು. ಆದರೆ, ಅವರ ಈ ಭೇಟಿಯನ್ನು ತಡೆಯುವ ಸಲುವಾಗಿ ರೈತ ಪ್ರತಿಭಟನಾಕಾರರು ಹೆಲಿಪ್ಯಾಡ್ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಅಜಯ್ ಮಿಶ್ರಾ ಸೇರಿದಂತೆ ಇನ್ನಿತರರು ರಸ್ತೆ ಮಾರ್ಗವಾಗಿಯೇ ಲಖಿಮಪುರಕ್ಕೆ ತೆರಳಿದ್ದರು. ಕಾರ್ಯಕ್ರಮದ ನಂತರ ಹಿಂದಿರುಗುತ್ತಿದ್ದ ವೇಳೆ ರೈತರ ಗುಂಪು ಕಪ್ಪು ಬಾವುಟ ಪ್ರದರ್ಶಿಸಿ ಕೇಂದ್ರದ ವಿರುದ್ಧ ಘೋಷಣೆಗಳನ್ನು ಕೂಗಿದ್ದರು.
ಈ ವೇಳೆ ಸಚಿವರ ಪುತ್ರ ರೈತರ ಮೇಲೆ ಕಾರ್ ಚಲಾಯಿಸಿದ್ದಾರೆ. ಈ ಘಟನೆಯಲ್ಲಿ ಅನೇಕ ರೈತರು ಮೃತಪಟ್ಟಿದ್ದಾರೆ. ಹಿಂಸಾಚಾರದಲ್ಲಿ ಪೊಲೀಸರು ಸಹ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಕಾರ, ಮೃತಪಟ್ಟ ನಾಲ್ವರು ರೈತರನ್ನು ಸುಖ್ವಿಂದರ್ ಸಿಂಗ್ (20), ಸತ್ನಾಮ್ ಸಿಂಗ್ (20), ಹರಿ ಸಿಂಗ್ (35) ಮತ್ತು ಸುಬ್ಬ ಸಿಂಗ್ (65) ಎಂದು ಗುರುತಿಸಲಾಗಿದೆ. ಈ ಘಟನೆ ನಂತರ ಲಖೀಮ್ಪುರ್ನಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ.
ಧರಣಿ ವೇಳೆ ಮಾಧ್ಯಮಗಳ ಎದುರು ಮಾತನಾಡಿರುವ ಮಾಜಿ ಸಿಎಂ ಅಖಿಲೇಶ್ ಯಾದವ್, “ಘಟನೆಗೆ ಕಾರಣರಾದ ಕೇಂದ್ರ ಸಚಿವ ಅಜಯ್ ಮಿಶ್ರಾ ಮತ್ತು ಡಿಸಿಎಂ ಕೇಶವ ಪ್ರಸಾದ್ ಮೌರ್ಯ ಅವರನ್ನು ಕೂಡಲೇ ಆ ಸ್ಥಾನದಿಂದ ಕಿತ್ತೊಗೆಯಬೇಕು. ಅಲ್ಲದೆ, ಘಟನೆಯಲ್ಲಿ ಮೃತಪಟ್ಟ ಅಮಾಯಕ ರೈತರಿಗೆ ಕನಿಷ್ಟ 2 ಕೋಟಿ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)