ಮದನೀಸ್ ಅಸೋಸಿಯೇಶನ್ ಬಂಟ್ವಾಳ ತಾಲೂಕು ಸಮಿತಿ
ಇದರ ವತಿಯಿಂದ ಅಕ್ಟೋಬರ್ 5 ಮಂಗಳವಾರ ಬೆಳಿಗ್ಗೆ ಹತ್ತು ಗಂಟೆಗೆ ಮುದುಂಗಾರುಕಟ್ಟೆ ಹಿದಾಯತುಲ್ ಇಸ್ಲಾಂ ಮಸ್ಜಿದ್ ನಲ್ಲಿ ನಡೆಯುವ ತಾಜುಲ್ ಉಲಮಾ ಅನುಸ್ಮರಣಾ ಪ್ರಯುಕ್ತ ಬಂಟ್ವಾಳ ತಾಲೂಕಿನ ಕೆಲಸವಿಲ್ಲದ ಮದನಿ ಉಸ್ತಾದರಿಗೆ ಕಿಟ್ ವಿತರಣೆ ಕಾರ್ಯಕ್ರಮ ಇಂದು ಕಲ್ಲಡ್ಕದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಹು BA ಸಲೀಂ ಮದನಿ ಬೈರಿಕಟ್ಟೆ ವಹಿಸಿದ್ದರು.ಬಂಟ್ವಾಳ ತಾಲೂಕು ಉಪಾಧ್ಯಕ್ಷರಾದ ಅಬ್ದುಲ್ ಲತೀಫ್ ಮದನಿ ಕಲ್ಲಡ್ಕ ಹಾಗೂ,SYS ಮಾಣಿ ಸೆಂಟರ್ ಕೋಶಾಧಿಕಾರಿ ದಾವೂದ್ ಕಲ್ಲಡ್ಕ,SYS ಕಲ್ಲಡ್ಕ ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಝ್ಝಾಖ್ ಫಲಾಹ್,ಬಿಲ್ಡಿಂಗ್ ಮಾಲಕರಾದ ಇಸ್ಮಾಯಿಲ್ ಟೈಲರ್ ಕಲ್ಲಡ್ಕ ಉಪಸ್ಥಿತರಿದ್ದರು.ಬಂಟ್ವಾಳ ತಾಲೂಕು ಪ್ರ.ಕಾರ್ಯದರ್ಶಿ ಅಕ್ಬರ್ ಅಲಿ ಮದನಿ ಆಲಂಪಾಡಿ ಸ್ವಾಗತಿಸಿ ವಂದಿಸಿದರು.







