ಹೊಸದಿಲ್ಲಿ: ಉತ್ತರಪ್ರದೇಶದ ಲಖಿಂಪುರಖೇರಿ ಜಿಲ್ಲೆಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ತನ್ನ ಪುತ್ರ ಕಾರನ್ನು ಚಲಾಯಿಸಿದ ಆರೋಪವನ್ನು ಎದುರಿಸುತ್ತಿರುವ ನಡುವೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ಅವರು ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.
ಘಟನೆಗೆ ಸಂಬಂಧಿಸಿ ವಿಪಕ್ಷಗಳು ಅಜಯ್ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ ಬಂಧಿಸುವಂತೆ ಆಗ್ರಹಿಸುತ್ತಿವೆ.
ಲಖಿಂಪುರ್ ಖೇರಿಯಲ್ಲಿ ರವಿವಾರ ಕಾರ್ಯಕ್ರಮಕ್ಕಾಗಿ ಅಜಯ್ ಮಿಶ್ರಾ ಭೇಟಿ ನೀಡಿದ ವೇಳೆ ನಡೆದ ಪ್ರತಿಭಟನೆಯ ವೇಳೆ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ.
ಸಚಿವರ ಬೆಂಗಾವಲಿನಲ್ಲಿದ್ದ ಕಾರೊಂದು ಪ್ರತಿಭಟನಾಕಾರರ ಮೇಲೆ ಹರಿದಿದೆ ಎಂದು ಆರೋಪಿಸಲಾಗಿದೆ. ಕಾರನ್ನು ಸಚಿವರ ಮಗ ಆಶಿಶ್ ಮಿಶ್ರಾ ಚಾಲನೆ ಮಾಡಿದ್ದಾನೆ ಎಂದು ರೈತರು ಆರೋಪಿಸಿದ್ದಾರೆ.
ಸಚಿವರು ಹಾಗೂ ಆಶಿಶ್ ಮಿಶ್ರಾ ಅವರು ತಾವು ಘಟನಾ ಸ್ಥಳದಲ್ಲಿ ಇರಲಿಲ್ಲ. ಘಟನೆಗೂ, ತಮಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಆದರೆ ರೈತರ ಮೇಲೆ ಹರಿದಿದ್ದ ಕಾರು ತಮ್ಮದ್ದೆಂದು ಒಪ್ಪಿಕೊಂಡಿದ್ದಾರೆ.
ಉತ್ತರಪ್ರದೇಶ ಪೊಲೀಸರು ಆಶೀಶ್ ಮಿಶ್ರಾ ವಿರುದ್ದ ಹತ್ಯೆ ಕೇಸನ್ನು ದಾಖಲಿಸಿಕೊಂಡಿದ್ದಾರೆ. ಆದರೆ ಈ ತನಕ ಆತನ ಬಂಧನವಾಗಿಲ್ಲ .
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ