ದುಬೈ | ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್, ಭಾರತದ ಗ್ರ್ಯಾಂಡ್ ಮುಫ್ತಿ ಮತ್ತು ಜಾಮಿಯಾ ಮರ್ಕಝ್ ಚಾನ್ಸೆಲರ್ ಅವರನ್ನು ಯುಎಇ ಸರ್ಕಾರವು ಗೋಲ್ಡನ್ ವೀಸಾ (UAE Golden Visa) ನೀಡಿ ಗೌರವಿಸಿದೆ. ಭಾರತ ಮತ್ತು ಇತರೆಡೆಗಳಲ್ಲಿ ಕಾಂತಪುರಂ ಉಸ್ತಾದರು ಮಾಡಿದ ಸಾಮಾಜಿಕ ಮತ್ತು ದತ್ತಿ ಕಾರ್ಯಗಳನ್ನು ಗುರುತಿಸಿ ಈ ಗೌರವವನ್ನು ನೀಡಲಾಗಿದೆ. ಯುಎಇ ಮತ್ತು ಜಾಮಿಯಾ ಮರ್ಕಝ್ ನಡುವಿನ ಅಂತರರಾಷ್ಟ್ರೀಯ ಸಂಬಂಧ, ಶೈಕ್ಷಣಿಕ ವಿನಿಮಯ ಮತ್ತು ದತ್ತಿ ಚಟುವಟಿಕೆಗಳು ಗೌರವಕ್ಕೆ ಪ್ರಮುಖ ಕಾರಣವಾಗಿವೆ.
ವಿವಿಧ ಕ್ಷೇತ್ರಗಳಲ್ಲಿನ ಪ್ರತಿಭಾವಂತ ವ್ಯಕ್ತಿಗಳನ್ನು ಗುರುತಿಸಿ, ಹತ್ತು ವರ್ಷಗಳ ಗೋಲ್ಡನ್ ವೀಸಾವನ್ನು ಯುಎಇ ಸರ್ಕಾರವು ನೀಡುತ್ತಿದೆ. ಶಿಕ್ಷಣ ಮತ್ತು ದತ್ತಿ ಚಟುವಟಿಕೆಗಳಿಗಾಗಿ ಭಾರತದಿಂದ ಗೋಲ್ಡನ್ ವೀಸಾ ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ ಕಾಂತಪುರಂ ಉಸ್ತಾದ್.
ಭಾರತದ ಗ್ರಾಂಡ್ ಮುಫ್ತಿ, ಜಾಮಿಯಾ ಮರ್ಕಝ್ ಚಾನ್ಸೆಲರ್, ಅತ್ಯುತ್ತಮ ಸಾಮಾಜಿಕ ಲೋಕೋಪಕಾರಿ, ಮತ್ತು ಅರಬಿಕ್ ಸೇರಿದಂತೆ ಹಲವು ಭಾಷೆಗಳಲ್ಲಿ ಉಪನ್ಯಾಸ ನೀಡುವ ಅವರ ಸಾಮರ್ಥ್ಯ ಸೇರಿದಂತೆ ಅರಬ್ ಜಗತ್ತು ಮತ್ತು ಅಂತಾರಾಷ್ಟ್ರೀಯ ರಂಗಗಳಲ್ಲಿ ಕಾಂತಪುರಂ ಉಸ್ತಾದರು ಮಹತ್ವದ ಪ್ರಭಾವವನ್ನು ಹೊಂದಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ, ಶೈಖ್ ಖಲೀಫಾ ಬಿನ್ ಝಾಯಿದ್ ಆಲ್ ನಹ್ಯಾನ್, ಯುನೈಟೆಡ್ ಅರಬ್ ಎಮಿರೇಟ್ಸ್ ನ ಉಪಾಧ್ಯಕ್ಷ ಮತ್ತು ಪ್ರಧಾನ ಮಂತ್ರಿ ಮತ್ತು ದುಬೈ ಆಡಳಿತಗಾರ ಶೈಖ್ ಮೊಹಮ್ಮದ್ ಬಿನ್ ರಾಶೀದ್ ಆಲ್ ಮಕ್ತೂಮ್, ಮತ್ತು ಅಬುಧಾಬಿಯ ರಾಜಕುಮಾರ, ಮತ್ತು ಯುಎಇ ಸಶಸ್ತ್ರ ಪಡೆಗಳ ಉಪ ಕಮಾಂಡರ್ -ಇನ್ -ಚೀಫ್ ಶೈಖ್ ಮುಹಮ್ಮದ್ ಬಿನ್ ಝಾಯಿದ್ ಆಲ್ ನಹ್ಯಾನ್ ಮುಂತಾದವರು ಗೋಲ್ಡನ್ ವೀಸಾಗೆ ಕೃತಜ್ಞರಾಗಿರುತ್ತಾರೆ ಎಂದು ಕಾಂತಪುರಂ ಹೇಳಿದರು.
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ