ನವದೆಹಲಿ: ಲಖಿಂಪುರಖೇರಿಯಲ್ಲಿ ನಡೆದದ್ದು ದುರದೃಷ್ಟಕರ ಎಂದು ಸುಪ್ರೀಂ ಕೋರ್ಟ್ (Supreme Court) ಹೇಳಿದೆ. ಉತ್ತರಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಗುರುವಾರ ಸ್ವಯಂ ಪ್ರೇರಿತವಾಗಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್ .ವಿ. ರಮಣ ನೇತೃತ್ವದ ನ್ಯಾಯಪೀಠ, ಹಿಂಸಾಚಾರ ಘಟನೆಯಲ್ಲಿ “ಯಾರ ಹೆಸರಿನಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಮತ್ತುಎಫ್ಐಆರ್ ದಾಖಲಿಸಿದ ಯಾರನ್ನಾದರೂ ಬಂಧಿಸಿದ್ದೀರಾ” ಎಂದು ನ್ಯಾಯಾಲಯ ಸರ್ಕಾರವನ್ನು ಕೇಳಿದೆ.
ನಾಳೆ ಪ್ರಕರಣದ ಕುರಿತ ವರದಿಯನ್ನು ತಿಳಿಸುವಂತೆ ಯುಪಿ ಸರ್ಕಾರಕ್ಕೆ ನಿರ್ದೇಶಿಸಲಾಗಿದೆ. ನಾಳೆ ಮತ್ತೆ ಪ್ರಕರಣದ ವಿಚಾರಣೆ ನಡೆಯಲಿದೆ. ಈ ವಿಷಯಗಳನ್ನು ಸ್ಪಷ್ಟಪಡಿಸುವಂತೆ ಮತ್ತು ನಾಳೆ ವಿವರವಾದ ಉತ್ತರವನ್ನು ನೀಡುವಂತೆ ನ್ಯಾಯಪೀಠ ಯುಪಿ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
“ತನಿಖೆ ಸರಿಯಾಗಿ ನಡೆದಿಲ್ಲ ಎಂದು ಮೃತರ ಕುಟುಂಬಸ್ಥರಿಂದ ಆರೋಪ ಕೇಳಿ ಬಂದಿದೆ.ಅಪಘಾತದಲ್ಲಿ ಮೃತಪಟ್ಟ ರೈತನ ತಾಯಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದಿದೆ. ಅವರನ್ನು ಚಿಕಿತ್ಸೆಗಾಗಿ ಉನ್ನತ ಆಸ್ಪತ್ರೆಗೆ ಸ್ಥಳಾಂತರಿಸಬೇಕು. ಎಲ್ಲಾ ವೈದ್ಯಕೀಯ ನೆರವು ನೀಡಬೇಕು ” – ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಸರ್ಕಾರಕ್ಕೆ ನಿರ್ದೇಶನ ನೀಡಿದರು.
ಅಲಹಾಬಾದ್ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಪ್ರದೀಪ್ ಶ್ರೀವಾಸ್ತವ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಯುತ್ತಿದೆ ಮತ್ತು ಎರಡು ತಿಂಗಳಲ್ಲಿ ವರದಿ ಸಲ್ಲಿಸಲಾಗುವುದು ಎಂದು ಯುಪಿ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ಆದರೆ ನ್ಯಾಯಾಲಯವು ಈ ವಿಷಯವನ್ನು ನಾಳೆ ಸ್ಪಷ್ಟಪಡಿಸುವಂತೆ ಮತ್ತು ವಿವರವಾದ ಉತ್ತರವನ್ನು ನೀಡುವಂತೆ ಸರ್ಕಾರಕ್ಕೆ ಆಜ್ಞಾಪಿಸಿದೆ.
ರೈತರ ಹತ್ಯೆಯ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟಿನ ಮೇಲ್ವಿಚಾರಣೆಯಲ್ಲಿ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಉತ್ತರ ಪ್ರದೇಶದಲ್ಲಿ ಇಬ್ಬರು ವಕೀಲರು ಅರ್ಜಿ ಸಲ್ಲಿಸಿದ್ದರು. ಇದಲ್ಲದೇ, ಸುಪ್ರೀಂ ಕೋರ್ಟ್ ಸ್ವಯಂಪ್ರೇರಣೆಯಿಂದ ಪ್ರಕರಣ ದಾಖಲಿಸಿದೆ. ರೈತರ ಹತ್ಯೆಗೆ ದೇಶವ್ಯಾಪಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸಿದೆ.
ಕಳೆದ ಭಾನುವಾರ ಸಂಜೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಚಲಾಯಿಸಿದ ಪರಿಣಾಮ ನಡುವೆ ವಾಹನ ಚಾಲನೆ ಮಾಡಿದರು. ನಾಲ್ಕು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ. ವಾಹನದ ಚಾಲಕ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಎಂದು ರೈತರು ಆರೋಪಿಸಿದ್ದಾರೆ. ಆತನ ವಿರುದ್ಧ ಪ್ರಕರಣ ದಾಖಲಾಗಿದೆ ಆದರೆ ಪೊಲೀಸರು ಆತನನ್ನು ಬಂಧಿಸಿಲ್ಲ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?