ತಿರುವನಂತಪುರ: ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿಯವರ ಚಿತ್ರವನ್ನು ಸೇರಿಸುತ್ತಿರುವ ಕುರಿತು ಕೇರಳ ಹೈಕೋರ್ಟ್ ಕೇಂದ್ರ ಸರ್ಕಾರದಿಂದ ವಿವರಣೆ ಕೇಳಿದೆ.
ಕೊಟ್ಟಾಯಂನ ಕಾಡುತುರುತಿ ಮೂಲದ ಪೀಟರ್ ಮಾಳಿಪ್ಪರಂಬಿಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿತ್ತು. ಅರ್ಜಿಯ ಪ್ರಕಾರ, ಕೋವಿಡ್ ವಿರುದ್ಧದ ರಾಷ್ಟ್ರೀಯ ಅಭಿಯಾನವು ಪ್ರಧಾನಿ ನರೇಂದ್ರ ಮೋದಿಯವರ ಅಭಿಯಾನವಾಗಿ ಮಾರ್ಪಟ್ಟಿದೆ. ಹಣ ಪಾವತಿಸಿ ಲಸಿಕೆ ಪಡೆದ ಪ್ರಮಾಣಪತ್ರದಲ್ಲಿ ಪ್ರಧಾನಿಯ ಚಿತ್ರವನ್ನು ಅಂಟಿಸುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಪ್ರಧಾನಮಂತ್ರಿಯವರ ಚಿತ್ರವನ್ನು ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಲಾಗಿದೆ. ಅರ್ಜಿಯ ಪ್ರಕಾರ, ಮೋದಿ ದೇಶದ ಹಣವನ್ನು ದುರುಪಯೋಗ ಪಡಿಸಿಕೊಂಡು ಒನ್ ಮ್ಯಾನ್ ಶೋ ಆಡುತ್ತಿದ್ದಾರೆ.
ಲಸಿಕೆ ಪ್ರಮಾಣಪತ್ರದಲ್ಲಿ ಮೋದಿಯ ಚಿತ್ರ ಸೇರಿಸುವುದನ್ನು ವಿರೋಧ ಪಕ್ಷಗಳು ತೀವ್ರ ವಿರೋಧವನ್ನು ಪ್ರಕಟಿಸಿತ್ತು.
ಇದರ ಹೊರತಾಗಿ, ವಿದೇಶಕ್ಕೆ ತೆರಳುವ ಭಾರತೀಯರು ಅಲ್ಲಿನ ಕಾನೂನಿನ ಅಡಚಣೆಯನ್ನೂ ಎದುರಿಸುವಂತಾಗಿದೆ. ಲಸಿಕೆ ಪ್ರಮಾಣಪತ್ರದಲ್ಲಿನ ಚಿತ್ರವನ್ನು ನೋಡಿ, ಅನೇಕ ಭಾರತೀಯರನ್ನು ಸೋಗಿನ ನೆಪದಲ್ಲಿ ವಿವಿಧ ವಿದೇಶಿ ವಿಮಾನ ನಿಲ್ದಾಣಗಳಲ್ಲಿನ ಉದ್ಯೋಗಸ್ಥರು ದೀರ್ಘ ಸಮಯ ತಡೆದು ನಿಲ್ಲಿಸಿದ ಪ್ರಕರಣಗಳು ನಡೆದಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ