ತಿರುವನಂತಪುರ: ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿಯವರ ಚಿತ್ರವನ್ನು ಸೇರಿಸುತ್ತಿರುವ ಕುರಿತು ಕೇರಳ ಹೈಕೋರ್ಟ್ ಕೇಂದ್ರ ಸರ್ಕಾರದಿಂದ ವಿವರಣೆ ಕೇಳಿದೆ.
ಕೊಟ್ಟಾಯಂನ ಕಾಡುತುರುತಿ ಮೂಲದ ಪೀಟರ್ ಮಾಳಿಪ್ಪರಂಬಿಲ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿತ್ತು. ಅರ್ಜಿಯ ಪ್ರಕಾರ, ಕೋವಿಡ್ ವಿರುದ್ಧದ ರಾಷ್ಟ್ರೀಯ ಅಭಿಯಾನವು ಪ್ರಧಾನಿ ನರೇಂದ್ರ ಮೋದಿಯವರ ಅಭಿಯಾನವಾಗಿ ಮಾರ್ಪಟ್ಟಿದೆ. ಹಣ ಪಾವತಿಸಿ ಲಸಿಕೆ ಪಡೆದ ಪ್ರಮಾಣಪತ್ರದಲ್ಲಿ ಪ್ರಧಾನಿಯ ಚಿತ್ರವನ್ನು ಅಂಟಿಸುವುದು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಪ್ರಧಾನಮಂತ್ರಿಯವರ ಚಿತ್ರವನ್ನು ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಲಾಗಿದೆ. ಅರ್ಜಿಯ ಪ್ರಕಾರ, ಮೋದಿ ದೇಶದ ಹಣವನ್ನು ದುರುಪಯೋಗ ಪಡಿಸಿಕೊಂಡು ಒನ್ ಮ್ಯಾನ್ ಶೋ ಆಡುತ್ತಿದ್ದಾರೆ.
ಲಸಿಕೆ ಪ್ರಮಾಣಪತ್ರದಲ್ಲಿ ಮೋದಿಯ ಚಿತ್ರ ಸೇರಿಸುವುದನ್ನು ವಿರೋಧ ಪಕ್ಷಗಳು ತೀವ್ರ ವಿರೋಧವನ್ನು ಪ್ರಕಟಿಸಿತ್ತು.
ಇದರ ಹೊರತಾಗಿ, ವಿದೇಶಕ್ಕೆ ತೆರಳುವ ಭಾರತೀಯರು ಅಲ್ಲಿನ ಕಾನೂನಿನ ಅಡಚಣೆಯನ್ನೂ ಎದುರಿಸುವಂತಾಗಿದೆ. ಲಸಿಕೆ ಪ್ರಮಾಣಪತ್ರದಲ್ಲಿನ ಚಿತ್ರವನ್ನು ನೋಡಿ, ಅನೇಕ ಭಾರತೀಯರನ್ನು ಸೋಗಿನ ನೆಪದಲ್ಲಿ ವಿವಿಧ ವಿದೇಶಿ ವಿಮಾನ ನಿಲ್ದಾಣಗಳಲ್ಲಿನ ಉದ್ಯೋಗಸ್ಥರು ದೀರ್ಘ ಸಮಯ ತಡೆದು ನಿಲ್ಲಿಸಿದ ಪ್ರಕರಣಗಳು ನಡೆದಿದೆ.
















ಇನ್ನಷ್ಟು ಸುದ್ದಿಗಳು
ಸಲಪಿ ಸಿದ್ಧಾಂತದ ಮುಖವಾಡ ಕಳಚಿದ ಕರಾವಳಿ: ಸೈದ್ಧಾಂತಿಕ ಸೋಲನ್ನು ಮುಚ್ಚಿಡಲು ದೈಹಿಕ ಹಲ್ಲೆಗೆ ಮುಂದಾದರೇ ಸಲಪಿಗಳು?
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?
ಕೇರಳ ವಿಧಾನಸಭಾ ಚುನಾವಣೆ: 102 ಸ್ಥಾನಗಳಲ್ಲಿ UDF ಗೆ ಭರ್ಜರಿ ಜಯ- LDF ಗೆ ಹೀನಾಯ ಸೋಲು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ