ದುಬೈ: ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಯುಎಇ ಸಮಿತಿ ಆಶ್ರಯದಲ್ಲಿ “ಶಾಂತಿ ವಾಹಕರೇ (ಸ) ತಾವು ಅಮರರು” ಎಂಬ ಶೀರ್ಷಿಕೆಯಲ್ಲಿ ಬೃಹತ್ ಮೀಲಾದ್ ಸಮಾವೇಶ ದುಬೈ ದೇರಾದಲ್ಲಿರುವ ಪರ್ಲ್ ಕ್ರೀಕ್ ಹೋಟೆಲ್ ನಲ್ಲಿ ಅಕ್ಟೊಬರ್ 15 ರಂದು ಶುಕ್ರವಾರ ಸಂಜೆ 6 ಘಂಟೆಗೆ ನಡೆಯಲಿದೆ.
ಪ್ರಮುಖ ಆತ್ಮೀಯ ಸುಪೀವರ್ಯರೂ, ಶಿಕ್ಷಣ ತಜ್ಞರೂ ಆದ ಬದ್ರುಸ್ಸಾದಾತ್ ಸಯ್ಯದ್ ಖಲೀಲುಲ್ ಬುಖಾರಿ ತಂಙ್ಞಳ್ (ಪ್ರಧಾನ ಕಾರ್ಯದರ್ಶಿ, ಕೇರಳ ಮುಸ್ಲಿಂ ಜಮಾಅತ್ ) ರವರು ದುಆ ನೇತೃತ್ವವನ್ನು ನೀಡಲಿದ್ದು, ಯುವ ವಾಗ್ಮಿ, ಎಸ್ಸೆಸ್ಸೆಫ್ ಕೊಡಗು ಜಿಲ್ಲಾ ಅಧ್ಯಕ್ಷರಾದ ಮೌಲಾನಾ ಶಾಫಿ ಸಅದಿ ಸೋಮವಾರಪೇಟೆ ಮುಖ್ಯ ಭಾಷಣ ಮಾಡಲಿದ್ದಾರೆ.
ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ (KSWA) ಯುಎಇ ಸಮಿತಿ ಅಧ್ಯಕ್ಷರಾದ ಅಬೂಬಕರ್ ಹಾಜಿ ಕೊಟ್ಟಮುಡಿ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ, ಪ್ರಮುಖ ಸಮಾಜ ಸೇವಕರೂ ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಕುಂಜಿಲ, ಉದ್ಯಮಿಗಳಾದ ನೆಲ್ಲರ ಗ್ರೂಪ್ ಛೇರ್ಮನ್ ಶಂಸುದ್ದೀನ್ ನೆಲ್ಲರ, ಕೆಸಿಎಫ್ ಯುಎಇ ಅಧ್ಯಕ್ಷರಾದ ಜಲೀಲ್ ನಿಝಾಮಿ ಎಮ್ಮೆಮಾಡು, ಆಬಿದ್ ಕಂಡಕ್ಕರೆ (ಪ್ರಧಾನ ಕಾರ್ಯದರ್ಶಿ, ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಸೌದಿ ಅರೇಬಿಯಾ), ಶಾಮ್ ಅಹ್ಮದ್ ನಾಪೋಕ್ಲು, ಮುಝಮ್ಮಿಲ್ ಪಾಲಿಬೆಟ್ಟ, ಝಮೀರ್ ಬೆಂಗಳೂರು ಸೇರಿದಂತೆ ಹಲವಾರು ಉಲಮಾ ಉಮರಾ ನಾಯಕರುಗಳು, ಯುಎಇ ಯಾ ಪ್ರಮುಖ ಉದ್ಯಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೊಡಗಿನ 400ರಷ್ಟು ಜನರು ಪಾಲ್ಗೊಳ್ಳಲಿದ್ದು, ಹುಬ್ಬುರ್ರಸೂಲ್ ಭಾಷಣ, ಪ್ರಾರ್ಥನಾ ಸಂಗಮ, ಅಭಿನಂದನಾ ಸಮಾರಂಭ, ಮೌಲೂದ್ ಪಾರಾಯಣ, ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು, ಮಹಿಳೆಯರಿಗಾಗಿ ವಿಶೇಷ ಸ್ಪರ್ಧೆಗಳು ನಡೆಯಲಿದ್ದು ಯುಎಇ ಯಲ್ಲಿರುವ ಎಲ್ಲಾ ಅನಿವಾಸಿಗಳು ಭಾಗವಹಿಸಿ ಸಹಕರಿಸಬೇಕಾಗಿ ಮೀಲಾದ್ ಸ್ವಾಗತ ಸಮಿತಿ ಛೇರ್ಮನ್ ಉಸ್ಮಾನ್ ಹಾಜಿ ನಾಪೋಕ್ಲು ಹಾಗೂ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮೂರ್ನಾಡು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ