ಸೌದಿ ಅರೇಬಿಯಾ: ಜುಬೈಲ್ ನಲ್ಲಿ ಹಲವಾರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ಕಣ್ಣಂಗಾರ್ ನಿವಾಸಿ ಹಸನ್ ಎಂಬುವವರು ತಾ: ಅಕ್ಟೋಬರ್ 1 ರಂದು ಹೃದಯಾಘಾತದಿಂದ ನಿಧನರಾಗಿದ್ದರು . ಇವರು ಉತ್ತಮ ಸ್ವಭಾವದ ವ್ಯಕ್ತಿ ಹಾಗು ಕೊಡುಗೈ ದಾನಿಯೂ ಆಗಿದ್ದರು. ಇವರ ಅಕಾಲಿಕ ನಿಧನವು ತುಂಬಲಾರದ ನಷ್ಟವಾಗಿದೆ. ಅವರ ಪಾರತ್ರಿಕ ಜೀವನವು ಉತ್ತಮವಾಗಿರಲೆಂದು ಅಲ್ಲಾಹನಲ್ಲಿ ಪ್ರಾರ್ಥಿಸುತ್ತ ಕೆ.ಸಿ.ಎಫ್ ದಮ್ಮಾಮ್ ಝೋನ್ ಸಮಿತಿಯ ವತಿಯಿಂದ ಸಂತಾಪವನ್ನು ಸೂಚಿಸಿದೆ.
ಮೃತರು ತಂದೆ, ತಾಯಿ ಹೆಂಡತಿ ಹಾಗು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮರಣೋತ್ತರ ಕ್ರಿಯೆಗೆ ಬೇಕಾದ ವ್ಯವಸ್ಥೆ ಕಲ್ಪಿಸಲು ಕೂಡಲೆ ಸ್ಪಂದಿಸಿ ಕಾರ್ಯ ಪ್ರವೃತ್ತರಾದ ಕೆ.ಸಿ.ಎಫ್ ಸಾಂತ್ವನ ಇಲಾಖೆ ಹಾಗೂ ಇತರ ಸಂಘ ಸಂಸ್ಥೆಗಳ ನಾಯಕರ ತಂಡವು ಭಾರತೀಯ ರಾಯಬಾರಿ ಕಛೇರಿ ಮತ್ತು ಇತರ ದಾಖಲೆ ಪತ್ರಗಳನ್ನು ಸರಿಪಡಿಸಿ ತಾ: ಅಕ್ಟೋಬರ್ 11 ರಂದು ಜುಬೈಲ್ ನಲ್ಲಿ ದಫನ ಕಾರ್ಯ ನಿರ್ವಹಿಸಲಾಯಿತು.
ಈ ಒಂದು ಕಾರ್ಯದಲ್ಲಿ ಸಹಕರಿಸಿದ ಕೆ.ಸಿ.ಎಫ್ ಸಾಂತ್ವನ ತಂಡದ ನಾಯಕರಾದ ಬಾಷಾ ಗಂಗಾವಳಿ, ಜುಬೈಲ್ ಕೆ.ಸಿ.ಎಫ್ ನಾಯಕರಾದ ನೌಫಲ್ ಮುಲ್ಕಿ, ಹಮೀದ್ ಕೃಷ್ಣಾಪುರ, ಕಲಂದರ್ ಮುಕ್ಕ, ರಾಝಿಕ್ ಕಣ್ಣಂಗಾರ್ ಅದೇ ರೀತಿ ಉದ್ಯಮಿಗಳಾದ ಆಸಿಫ್ ಎಕ್ಸ್ಪರ್ಟೈಸ್, ಅಬ್ದುರ್ರಹ್ಮಾನ್ ಫೇಸ್,ಇಬ್ಬ ಬಜ್ಪೆ, ಬಷೀರ್ ಕಣ್ಣಂಗಾರ್ ಮತ್ತು ಅಬ್ದುಲ್ ಅಝೀಝ್ ಇವರುಗಳಿಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ. ಮೃತರ ಕುಟುಂಬದವರು, ಗೆಳೆಯರು ಉಪಸ್ಥಿತರಿದ್ದು ಕೆ.ಸಿ.ಎಫ್ ಶೋಲ ಸೆಕ್ಟರ್ ಜುಬೈಲ್ ಇದರ ಅಧ್ಯಕ್ಷರಾದ MKM ಅಬೂಬಕ್ಕರ್ ಮದನಿ ಹೊಸಂಗಡಿ ಇವರ ನೇತೃತ್ವದಲ್ಲಿ ಅಂತ್ಯಕ್ರಿಯೆ ನೆರವೇರಿಸಿ ಮೃತರಿಗಾಗಿ ದುಆ ಮಾಡಲಾಯಿತು.

















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ