ಮಂಗಳೂರು: ಕರಾವಳಿ ಜಿಲ್ಲೆಯಲ್ಲಿ ನೈತಿಕ ಪೋಲಿಸ್ ಗಿರಿ ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿದ್ದು, ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕಾದ ಪೋಲಿಸ್ ಇಲಾಖೆ ಮೂಕಪ್ರೇಕ್ಷಕರಾಗಿದ್ದು ಜಿಲ್ಲೆಯಲ್ಲಿ ಆತಂಕದ ಸನ್ನಿವೇಶ ನಿರ್ಮಾಣವಾಗಿದೆ.
ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಮುಖ್ಯಮಂತ್ರಿಗಳು ಅಂತಹ ದುಷ್ಕ್ರತ್ಯಗಳಿಗೆ ಮತ್ತಷ್ಟು ಪ್ರೋತ್ಸಾಹ ನೀಡುವಂತೆ, ಭಾವನೆಗಳಿಗೆ ದಕ್ಕೆಯಾದಾಗ ಕ್ರಿಯೆಗೆ ಪ್ರತಿಕ್ರಿಯೆ ನಡೆಯುತ್ತದೆ ಎಂಬ ಹೇಳಿಕೆಯು ತೀರಾ ಖಂಡನೀಯವಾಗಿದೆ. ಇದರಿಂದ ಜಿಲ್ಲೆಯಲ್ಲಿ ಮತ್ತಷ್ಟು ಪ್ರಕ್ಷುಬ್ಧ ವಾತಾವರಣ ನಿರ್ಮಾಣಗೊಳ್ಳಲಿದೆ ಎಂದು CPIM ತೀವ್ರ ಆತಂಕ ವ್ಯಕ್ತಪಡಿಸಿದೆ.
ಬಿಜೆಪಿ ಸಂಘಪರಿವಾರ ತನ್ನ ಗುಪ್ತ ಅಜೆಂಡಾಗಳನ್ನು ಬಹಳ ವ್ಯವಸ್ಥಿತವಾಗಿ ಜಾರಿಗೊಳಿಸುತ್ತಿದ್ದು, ಶಿಕ್ಷಣ, ಉದ್ಯೋಗ,ಆರೋಗ್ಯ ಸೇರಿದಂತೆ ಜನರ ಬದುಕಿನ ವಿಚಾರಗಳನ್ನು ಬದಿಗೆ ಸರಿಸಿ ಕೇವಲ ಹಿಂದುತ್ವದ ಅಮಲನ್ನು ಯುವಜನತೆಯ ತಲೆಗೇರಿಸಿ ಕೋಮುದ್ವೇಷದಿಂದಲೇ ಜಿಲ್ಲೆಯ ರಾಜಕಾರಣವನ್ನು ನಿಯಂತ್ರಿಸುತ್ತಿದೆ.
ಇದರಿಂದಾಗಿ ಪುಂಡಪೋಕರಿಗಳು ಕಾನೂನನ್ನು ಕೈಗೆತ್ತಿ ಅಮಾಯಕರ ಮೇಲೆ ದಾಳಿ ನಡೆಸುವ ಮೂಲಕ ಸಂಘಪರಿವಾರ ತನ್ನ ತಾಲಿಬಾನ್ ಸಂಸ್ಕ್ರತಿಯನ್ನು ಪ್ರದರ್ಶಿಸುತ್ತಿದೆ.ಇದನ್ನು ಕೂಡಲೇ ಮಟ್ಟ ಹಾಕಲು ಜಿಲ್ಲೆಯ ಪೋಲಿಸ್ ಇಲಾಖೆ ಹಾಗೂ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು CPIM ಮಂಗಳೂರು ನಗರ ದಕ್ಷಿಣ ಸಮಿತಿಯು ಒತ್ತಾಯಿಸಿದೆ.
ಸುನಿಲ್ ಕುಮಾರ್ ಬಜಾಲ್
CPIM ಮಂಗಳೂರು ನಗರ ದಕ್ಷಿಣ ಸಮಿತಿ
















ಇನ್ನಷ್ಟು ಸುದ್ದಿಗಳು
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ