ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತವು ಮಾಲ್ಗಳು, ಚಿತ್ರಮಂದಿರ ಪ್ರವೇಶಿಸಲು ಕೋವಿಡ್ -19 ಲಸಿಕೆ ಪಡೆದಿರುವ ಪ್ರಮಾಣ ಪತ್ರಗಳನ್ನು ಕಡ್ಡಾಯಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಈ ಕುರಿತು ಮಾತನಾಡಿದ್ದಾರೆ.
“ಸಾಂಕ್ರಾಮಿಕ ಪರಿಸ್ಥಿತಿ ಹದಗೆಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಭಾನುವಾರದಿಂದ ಹೆಚ್ಚುವರಿ ಕಣ್ಗಾವಲು ಕ್ರಮ ಕೈಗೊಳ್ಳಲಾಗುವುದು. ಮಲ್ಟಿಪ್ಲೆಕ್ಸ್ಗಳು, ಚಿತ್ರಮಂದಿರಗಳು ಮತ್ತು ಥಿಯೇಟರ್ಗಳು ಶೇ 100 ಪ್ರತಿಶತ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶವಿದ್ದರೂ, ಲಸಿಕೆಯ ಎರಡು ಡೋಸ್ಗಳನ್ನು ಪಡೆದವರನ್ನು ಮಾತ್ರ ಒಳಗೆ ಬಿಡಲಾಗುತ್ತದೆ. ಎರಡು ಡೋಸ್ಗಳನ್ನು ಪಡೆದಿರುವ ಪ್ರಮಾಣ ಪತ್ರವನ್ನು ಒದಗಿಸಿದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿಸಲಾಗುವುದು” ಎಂದು ಹೇಳಿದರು.
ಮಂಗಳೂರು ಮಹಾನಗರ ಪಾಲಿಕೆ ಲಸಿಕೆ ಪಡೆಯದೇ ಇರುವವರನ್ನು ಗುರುತಿಸಲು ವಿಶೇಷ ತಂಡಗಳನ್ನು ರಚನೆ ಮಾಡಿದೆ. ನಗರದಲ್ಲಿ ವಿಶೇಷ ಲಸಿಕಾ ಅಭಿಯಾನಗಳನ್ನು ನಡೆಸಲಾಗುತ್ತಿದೆ. ಈ ವೇಳೆಯೂ ಲಸಿಕೆ ಹಾಕಿಸಿಕೊಳ್ಳದ ಜನರ ಪಟ್ಟಿಯನ್ನು ಮಾಡಲಾಗುವುದು. ಇದರೊಂದಿಗೆ ನಗರದಲ್ಲಿ ಅರ್ಹ ಜನಸಂಖ್ಯೆಗೆ ಆದಷ್ಟು ಬೇಗ ಲಸಿಕೆ ಹಾಕಲು ಸಹಾಯಕವಾಗುತ್ತದೆ ಎಂದು ಅಧಿಕಾರಿಗಳು ಹೇಳಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್