ಪುತ್ತೂರು: ತಾಲೂಕಿನ ಸುಳ್ಯಪದವು ಎಂಬಲ್ಲಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಬಿಜೆಪಿ ಮತ್ತು ಆರೆಸ್ಸೆಸ್ ಹಿರಿಯ ಮುಖಂಡ ನಾರಾಯಣ ರೈ ಅತ್ಯಾಚಾರ ಮಾಡಿ ಗರ್ಭದಾನ ಮಾಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಬೇಕಾದ ಪೊಲೀಸರು ಆರೋಪಿಯನ್ನು ರಕ್ಷಿಸಲು ಹೊರಟಿರುವ ನಡೆ ಖಂಡನೀಯ. ಅದೇ ರೀತಿ ಆರೋಪಿಯನ್ನು ಶೀಘ್ರ ಬಂಧಿಸಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾ ಸಮಿತಿಯು ಆಗ್ರಹಿಸಿದೆ.
ಆರೋಪಿ ಬಿಜೆಪಿ ಮುಖಂಡ ತನ್ನ ಪ್ರಭಾವ ಬಳಸಿಕೊಂಡು ಸಂಪೂರ್ಣ ಪ್ರಕರಣವನ್ನು ಬಾಲಕಿಯ ಸಹೋದರನ ಮೇಲೆ ಹೊರಿಸಿ ಘಟನೆಯ ಸತ್ಯಾಸತ್ಯತೆ ಮುಚ್ಚಿಹಾಕಿದ್ದಾರೆ. ಪ್ರಕರಣ ಮುಚ್ಚಿ ಹಾಕಲು ಸ್ಥಳೀಯ ಪೋಲಿಸ್ ಅಧಿಕಾರಿಗಳು ಬಾಲಕಿಯ ಕುಟುಂಬಕ್ಕೆ ಬೆದರಿಕೆ ಹಾಕಿರುವುದು ಮತ್ತು ಡಿಎನ್ಎ ಪರೀಕ್ಷೆ ನಡೆಸದೆ ಪ್ರಕರಣವನ್ನು ಬಾಲಕಿಯ ಅಣ್ಣನ ತಲೆಗೆ ಕಟ್ಟಿ ಇಲ್ಲಿನ ಆಡಳಿತ ವ್ಯವಸ್ಥೆ ಕೈಜೋಡಿಸಿರುವುದು ಆರೋಪಿಯೊಂದಿಗೆ ವಿಪರ್ಯಾಸ.
ಇಷ್ಟೆಲ್ಲಾ ನಡೆದು ಒಂದು ತಿಂಗಳು ಕಳೆದರೂ ಮಾಧ್ಯಮವಾಗಲಿ, ಆಡಳಿತ ವ್ಯವಸ್ಥೆಯಾಗಲಿ ಮಾತೆತ್ತಿಲ್ಲ. ಒಟ್ಟಿನಲ್ಲಿ ಬಾಲಕಿಯ ಕುಟುಂಬದ ಅಸಹಾಯಕತೆಯನ್ನು ಉಪಯೋಗಿಸಿಕೊಂಡು ಆರೋಪಿ ಬಿಜೆಪಿ ಮುಖಂಡನ ಪ್ರಕರಣವನ್ನು ಮುಚ್ಚಿಹಾಕಲು ವ್ಯವಸ್ಥಿತ ಯೋಜನೆ ರೂಪಿಸಲಾಗಿದೆ. ಈ ಘಟನೆಯ ಕುರಿತು ಉನ್ನತ ಮಟ್ಟದ ಅಧಿಕಾರಿಗಳಿಂದ ತನಿಖೆಯಾಗಬೇಕು. ಪ್ರಕರಣ ಮುಚ್ಚಿ ಹಾಕಲು ಕೈಜೋಡಿಸಿದ ಎಲ್ಲಾ ಅಧಿಕಾರಿಗಳನ್ನು ತನಿಖೆ ನಡೆಸಿ ಶಿಕ್ಷೆಗೊಳಪಡಿಸಬೇಕು ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾಧ್ಯಕ್ಷರಾದ ಅನ್ಸಾರ್ ಬೆಳ್ಳಾರೆ ರವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ
ದೆಹಲಿಯಲ್ಲಿ ನವಜಾತ ಶಿಶುಗಳನ್ನು ಮಾರುವ ‘ಮಕ್ಕಳ’ ಮಾರುಕಟ್ಟೆ: ಬೃಹತ್ ಮಾಫಿಯಾ ಪತ್ತೆ
ಸಚಿವ ಸಂಪುಟ ವಿಸ್ತರಣೆ: ಅಹಿಂದ, ಮುಸ್ಲಿಂ ಸಮುದಾಯಕ್ಕೆ ಅನ್ಯಾಯ- ದ.ಕ.ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ಷೇಪ
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್