ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯ ಮತ್ತು ಅವರ ಪ್ರಾರ್ಥನಾ ಸ್ಥಳಗಳ ಮೇಲಿನ ಹಿಂಸಾಚಾರವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಚೆಯರ್ ಮೆನ್ ಒ.ಎಂ.ಎ ಸಲಾಂ ಖಂಡಿಸಿದ್ದಾರೆ.
ನೆರೆಯ ದೇಶದಲ್ಲಿ ಕೇಳಿ ಬರುತ್ತಿರುವ ಸಾವು ಮತ್ತು ವಿನಾಶದ ಸುದ್ದಿಗಳು ಅತ್ಯಂತ ಆತಂಕಕಾರಿ ಹಾಗೂ ದುರಾದೃಷ್ಟಕರವಾಗಿವೆ. ಕೆಲವು ಅನಧಿಕೃತ ಆರೋಪಗಳ ಆಧಾರದಲ್ಲಿ ಕಾನೂನನ್ನು ಕೈಗೆತ್ತಿಕೊಂಡು ಇತರ ಸಮುದಾಯಗಳಿಗೆ ಸೇರಿದ ಅಮಾಯಕರನ್ನು ಗುರಿಪಡಿಸುವ ವಿಚಾರ ಯಾವುದೇ ನಾಗರಿಕ ಸಮಾಜಕ್ಕೆ ಬೆದರಿಕೆಯಾಗಿದೆ. ಇತರರಿಗೆ ಪಾಠ ಕಲಿಸುವ ನಿಟ್ಟಿನಲ್ಲಿ ಇಂತಹ ಜನರನ್ನು ನಿಯಂತ್ರಿಸಿ ಶಿಕ್ಷೆಗೆ ಗುರಿಪಡಿಸಬೇಕಾಗಿದೆ ಎಂದು ಒ.ಎಂ.ಎ.ಸಲಾಂ ಹೇಳಿದರು.
ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಸ್ವಾತಂತ್ರ್ಯವನ್ನು ಯಾವುದೇ ಸನ್ನಿವೇಶಗಳಲ್ಲೂ ಉಲ್ಲಂಘಿಸಲು ಸಾಧ್ಯವಿಲ್ಲ ಮತ್ತು ಇದು ಕಾನೂನಿನ ನಿಯಮಗಳೊಂದಿಗೆ ಕ್ರಿಯಾತ್ಮಕ ಸಮಾಜವನ್ನು ನಿರ್ಣಯಿಸಲು ಬಳಸಲಾಗುವ ಮಾನದಂಡವಾಗಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ದಾಳಿಗೆ ಭಾರತದಲ್ಲಿ ಮುಸ್ಲಿಮರ ವಿರುದ್ಧದ ಕಿರುಕುಳವೇ ಕಾರಣ ಎಂಬ ಶೇಖ್ ಹಸೀನಾರ ಹೇಳಿಕೆ ಸ್ವೀಕಾರ್ಹವಲ್ಲ. ಅಲ್ಪಸಂಖ್ಯಾತರನ್ನು ದೇಶದ ಸಮಾನ ಪ್ರಜೆಗಳೆಂದು ಹಸೀನಾರವರು ತನ್ನ ಇತ್ತೀಚಿನ ಹೇಳಿಕೆಯಲ್ಲಿ ಒಪ್ಪಿಕೊಂಡಿದ್ದು, ಆಕೆ ಇದನ್ನು ಅನುಷ್ಠಾನದ ಮೂಲಕ ಸಾಬೀತುಪಡಿಸಬೇಕು ಮತ್ತು ದೇಶದ ಹಿಂದೂ ಅಲ್ಪಸಂಖ್ಯಾತರ ಶಾಂತಿ ಮತ್ತು ಸುರಕ್ಷತೆಯನ್ನು ಖಾತರಿಪಡಿಸಬೇಕೆಂದು ಒ.ಎಂ.ಎ. ಸಲಾಂ ಹೇಳಿದರು.
















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ
ಪರೀಕ್ಷೆಗೂ ಹಿಜಾಬ್ ಗೂ ಸಂಬಂಧವಿಲ್ಲ- ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಣೆ
ಜನಾದೇಶವಿಲ್ಲದೆ ಬಿಜೆಪಿಗೆ ಗೆಲುವು: ಇದು ಇವಿಎಂ ದುರ್ಬಳಕೆ- ಸಂಘಟಿತ ಹೋರಾಟಕ್ಕೆ ಕಾಂಗ್ರೆಸ್ಗೆ ದೀದಿ ಆಹ್ವಾನ