ಬೆಂಗಳೂರು: ದೇಶದಲ್ಲಿ ಮುಸ್ಲಿಂ ಸಮುದಾಯದ 22 ಕೋಟಿ ಜನರಿದ್ದಾರೆ. ಹೀಗಿರುವಾಗ ದೇಶದಲ್ಲಿ ಮುಸ್ಲಿಮರು ಅಲ್ಪಸಂಖ್ಯಾತರು ಹೇಗಾಗುತ್ತಾರೆ? ಎಂದು ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಪ್ರಶ್ನಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಗಳಿಕೆಗಾಗಿ ಮುಸ್ಲಿಮರ ಓಲೈಕೆ ನಡೆಯುತ್ತಿಲ್ಲ. ಮುಸ್ಲಿಮರು ಬಹುಸಂಖ್ಯೆಯಲ್ಲಿದ್ದಾರೆ ಎಂದು ಹೇಳಿದರು.
ಮುಸ್ಲಿಮರ ಕೈ ಹಿಡಿಯಲು ಯಾವುದೇ ಪಕ್ಷ ಬೇಕಿಲ್ಲ. ಸಂವಿಧಾನ ಒಂದೇ ಸಾಕು.
ನಮ್ಮದು ಜಾತ್ಯತೀತ ದೇಶ. ಮುಸ್ಲಿಮರು ಜಾತ್ಯತೀತ ಪಕ್ಷಗಳ ಜತೆಯೇ ಇರುತ್ತಾರೆ. ಕಾಂಗ್ರೆಸ್ 70 ವರ್ಷಗಳಿಂದ ಜಾತ್ಯತೀತತೆಯ ರಕ್ಷಣೆಗಾಗಿ ನಿಂತಿದ್ದರಿಂದ ಮುಸ್ಲಿಮರು ಅದನ್ನು ಬೆಂಬಲಿಸುತ್ತಿದ್ದಾರೆ. ನಾಳೆ ಕಾಂಗ್ರೆಸ್ ಜಾತ್ಯತೀತ ತತ್ವಗಳ ವಿರುದ್ಧ ನಡೆದರೆ ಬೆಂಬಲ ನೀಡುವುದಿಲ್ಲ. ಮುಸ್ಲಿಮರು ಕಾಂಗ್ರೆಸ್ಗೆ ಮಾತ್ರ ಬೆಂಬಲ ನೀಡುವುದಲ್ಲ, ಬಿಜೆಪಿ ಕೂಡ ಜಾತ್ಯತೀತ ಪಕ್ಷವಾದರೆ ಆ ಪಕ್ಷದ ಜತೆಯೂ ಗುರುತಿಸಿಕೊಳ್ಳುತ್ತಾರೆ ಎಂದು ಹೇಳಿದರು.
ಸಿ.ಎಂ. ಇಬ್ರಾಹಿಂ ಪಕ್ಷ ತೊರೆಯುವ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಅವರು ಹಿರಿಯ ನಾಯಕ. ಅವರನ್ನು ಪರಿಷತ್ನಲ್ಲಿ ಪ್ರತಿಪಕ್ಷ ನಾಯಕರನ್ನಾಗಿ ಮಾಡಬೇಕೋ, ಬೇಡವೋ ಎಂಬ ಬಗ್ಗೆ ಸಮುದಾಯದ ಬಣ್ಣ ಕೊಡುವುದು ಬೇಡ. ನನಗೆ ಅಧಿಕಾರ ನೀಡಿದ್ದು ಕಾಂಗ್ರೆಸ್ ಪಕ್ಷ. ಅವರಿಗೂ ಕಾಂಗ್ರೆಸ್ ಪಕ್ಷ ಅಧಿಕಾರ ನೀಡಿದೆ. ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದಾಗ ಸಚಿವ ಸ್ಥಾನ ನೀಡಲಾಗಿತ್ತು. ಗುಂಡೂರಾವ್ ಸರಕಾರದಲ್ಲಿ ಸಚಿವರಾಗಿದ್ದರು,” ಎಂದು ಹೇಳಿದರು.
ಜಾಫರ್ ಷರೀಫ್ ಅವರ ಮೊಮ್ಮಗ ಸೋಲಲು ಸಿದ್ದರಾಮಯ್ಯ ಕಾರಣ ಎಂಬ ಕುಮಾರಸ್ವಾಮಿ ಆರೋಪಕ್ಕೆ, ”ಕುಮಾರಸ್ವಾಮಿಯವರ ಹೇಳಿಕೆ ಎಲ್ಲವೂ ಸತ್ಯವಲ್ಲ. ಹಾಗಾದರೆ ಜಾಫರ್ ಷರೀಫ್ ಮೊಮ್ಮಗನಿಗೆ ಅವರೇ ಜೆಡಿಎಸ್ನಿಂದ ನಿಲ್ಲಿಸಿ ಗೆಲ್ಲಿಸಬೇಕಿತ್ತು. ಯಾಕೆ ಹಾಗೆ ಮಾಡಲಿಲ್ಲ? ಹೀಗೆ ಮಾತನಾಡುತ್ತಾ ಹೋದರೆ ನಾವು ಸಾಕಷ್ಟು ಮಾತನಾಡಬಹುದು” ಎಂದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ