ಕಲ್ಲಿಕೋಟೆ :ಕೋಝಿಕ್ಕೋಡ್, ಇಂಙಪುಝ ಎಲೋಕ್ಕರ ನಿವಾಸಿ ಸಿರಾಜ್ ಸೌದಿಯಿಂದ ನೇರವಾಗಿ, ಎಪಿ ಉಸ್ತಾದರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಲು ಕಾರಂದೂರು ಮರ್ಕಝ್ ಗೆ ಆಗಮಿಸಿದರು.
ಐದು ವರ್ಷಗಳ ಹಿಂದೆ ನಡೆದ ಕಾರು ಅಪಘಾತದಲ್ಲಿ ಸಿರಾಜ್ ಅವರ ಜೀವನವೇ ಬುಡಮೇಲಾಯಿತು. ಸೌದಿ ಅರೇಬಿಯಾದ ತಾಯಿಫ್ ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಸಿರಾಜ್ ಅವರು ಓಡಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಇಬ್ಬರು ಸೌದಿ ಪ್ರಜೆಗಳು ಮರಣಹೊಂದಿದ್ದರು.ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಸಿರಾಜ್ ಅವರ ಬಿಡುಗಡೆಗೆ ಮೃತರ ಸಂಬಂಧಿಕರಿಗೆ 75 ಲಕ್ಷ ರೂಪಾಯಿ(ಬ್ಲಡ್ ಮನಿ) ನೀಡುವಂತೆ ಸೌದಿ ನ್ಯಾಯಾಲಯ ಆದೇಶಿಸಿದೆ.
ಕ್ಯಾನ್ಸರ್ ಪೀಡಿತ ತಂದೆ ಮತ್ತು ತಾಯಿ, ಪತ್ನಿ ಹಾಗೂ ಪುಟ್ಟ ಹೆಣ್ಣುಮಗುವನ್ನು ಹೊಂದಿರುವ ಕುಟುಂಬದ ಮನೆಯನ್ನು ಮಾರಾಟ ಮಾಡಿದರೂ ಈ ಬೃಹತ್ ಮೊತ್ತವನ್ನು ಕಂಡುಹಿಡಿಯುವುದು ಅಸಾಧ್ಯವಾಗಿತ್ತು. ಈ ನಿಟ್ಟಿನಲ್ಲಿ ಕುಟುಂಬವು ಕೇರಳ ಮುಸ್ಲಿಂ ಜಮಾಅತ್ ಅಧ್ಯಕ್ಷರಾದ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್ ಅವರೊಂದಿಗೆ ತಿಳಿಸಿದ್ದು, ಅವರ ಸೂಚನೆಯಂತೆ ಐಸಿಎಫ್ ಸೌದಿ ಸಮಿತಿಯು ಈ ವಿಷಯದಲ್ಲಿ ಮಧ್ಯಪ್ರವೇಶಿಸಿದೆ.
ಈ ಮೊತ್ತವನ್ನು ಕಡಿತಗೊಳಿಸುವಂತೆ ಸಮಿತಿಯು ನ್ಯಾಯಾಲಯಕ್ಕೆ ಮನವಿ ಮಾಡಿತು ಮತ್ತು ಮೃತರ ಸಂಬಂಧಿಕರನ್ನು ಸಂಪರ್ಕಿಸಿತು. ಇದರ ಪರಿಣಾಮ ಮೃತರ ವಾರಸುದಾರರು 33 ಲಕ್ಷ ರೂ. ಪಾವತಿಸುವಂತೆ ತಿಳಿಸಿದರು. ಸಿರಾಜ್ ಅವರ ಸಂಬಂಧಿಕರಿಗೆ ಈ ಮೊತ್ತವನ್ನೂ ಪಾವತಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ,ಐಸಿಎಫ್ ಸೌದಿ ರಾಷ್ಟ್ರೀಯ ಸಮಿತಿಯು ಸಿರಾಜ್ ಬಿಡುಗಡೆಗಾಗಿ ಹಣವನ್ನು ಸಂಗ್ರಹಿಸಿತು.
ಕಳೆದ ದಿನ ಸಿರಾಜ್ ಬಿಡುಗಡೆಗೊಂಡಿದ್ದು, ಊರಿಗೆ ತೆರಳಿ ತನ್ನ ಮನೆಗೆ ತೆರಳುವ ಮುಂಚಿತವಾಗಿ ತನ್ನ ಬಿಡುಗಡೆಗೆ ಕಾರಣಕರ್ತರಾದ ಇಂಡಿಯನ್ ಗ್ರ್ಯಾಂಡ್ ಮುಫ್ತಿ, ಸುಲ್ತಾನುಲ್ ಉಲಮಾ ಎ. ಪಿ. ಉಸ್ತಾದರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು. ಕೇರಳ ಮುಸ್ಲಿಂ ಜಮಾಅತ್ ಮತ್ತು ಐಸಿಎಫ್ ಸೌದಿ ರಾಷ್ಟ್ರೀಯ ಸಮಿತಿಗೆ ಧನ್ಯವಾದಗಳನ್ನು ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ