ರಿಯಾದ್ – ಮುಖ್ಯರಸ್ತೆಯಲ್ಲಿ 20 ಮೀಟರ್ ಗಿಂತ ಹೆಚ್ಚು ವಾಹನಗಳನ್ನು ಹಿಂದಕ್ಕೆ ಚಲಾಯಿಸಿ, ಸಂಚಾರ ನಿಯಮ ಉಲ್ಲಂಘಿಸಿದರೆ 150 ರಿಯಾಲ್ ನಿಂದ 300 ರಿಯಾಲ್ ವರೆಗೆ ದಂಡ ವಿಧಿಸಲಾಗುವುದು ಎಂದು ಸಂಚಾರ ನಿರ್ದೇಶನಾಲಯ ಎಚ್ಚರಿಕೆ ನೀಡಿದೆ.
ಸುರಕ್ಷಿತ ಮತ್ತು ಕಾನೂನುಬದ್ಧ ರೀತಿಯಲ್ಲಿ ರಸ್ತೆಯಿಂದ ನಿರ್ಗಮಿಸಲು ಸಾಧ್ಯವಾಗದಿದ್ದರೆ, ಮುಂದಿನ ಎಕ್ಸಿಟ್ ತನಕ ವಾಹನವನ್ನು ಚಲಾಯಿಸಬೇಕು.ರಸ್ತೆಯಲ್ಲಿನ ಸುಗಮ ಸಂಚಾರಕ್ಕೆ ಅಡ್ಡಿ ಮಾಡಬಾರದು.
ಪ್ರಯಾಣಿಸುವ ವೇಳೆ ಅನಿರೀಕ್ಷಿತವಾಗಿ ಟೈರ್ ಒಡೆದುಹೋದ ಸಂದರ್ಭದಲ್ಲಿ ತಮ್ಮ ಮತ್ತು ರಸ್ತೆ ಬಳಸುವ ಇತರರ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಂಚಾರ ನಿರ್ದೇಶನಾಲಯವು ಚಾಲಕರನ್ನು ಎಚ್ಚರಿಸಿದೆ.
ತಮ್ಮ ವಾಹನದ ಟೈರ್ ಅನಿರೀಕ್ಷಿತವಾಗಿ ಸ್ಫೋಟಗೊಂಡರೆ ಚಾಲಕರು ಪಾಲಿಸಬೇಕಾದ ಏಳು ಹಂತಗಳು
- ಸ್ಟೀರಿಂಗ್ ಚಕ್ರವನ್ನು ಬಿಗಿಯಾಗಿ ಹಿಡಿದಿಟ್ಟುಕೊಳ್ಳುವುದು.
- ಬ್ರೇಕ್ ಹಾಕಬಾರದು.
- ಎಕ್ಸಲರೇಟರ್ ನಿಂದ ಪಾದವನ್ನು ಎತ್ತಬೇಕು.
- ರಸ್ತೆಯ ಬಲಭಾಗದಲ್ಲಿ ಯಾರೂ ಇಲ್ಲವೆಂದು ಖಾತರಿಪಡಿಸಬೇಕು.
- ನಂತರ ವಾಹನವನ್ನು ರಸ್ತೆ ಬದಿಗೆ ಚಲಾಯಿಸ ಬೇಕು.
- ವಾಹನವನ್ನು ಸುರಕ್ಷಿತ ಸ್ಥಳದಲ್ಲಿ ನಿಲ್ಲಿಸಲು ವಿಶೇಷ ಕಾಳಜಿ ವಹಿಸಬೇಕು.
- ವಾಹನದ ಎಮರ್ಜೆನ್ಸಿ ಸಿಗ್ನಲ್ ವರ್ತಿಸಬೇಕು.
ಎಂದು ಸಂಚಾರ ನಿರ್ದೇಶನಾಲಯ ಎಚ್ಚರಿಕೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ