ಪಾಲಾ(ಕೇರಳ)|ವಿವಾದಾತ್ಮಕ ನಾರ್ಕೋಟಿಕ್ ಜಿಹಾದ್ ಪರಾಮರ್ಶೆ ಸಂಬಂಧಿಸಿದಂತೆ ಪಾಲಾ ಬಿಷಪ್ ಮಾರ್ ಜೋಸೆಫ್ ಕಲ್ಲರಂಙ್ಙಾಟ್ ವಿರುದ್ಧ ದೂರು ದಾಖಲು.
ಕುರುವಿಲಂಗಾಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಾಲಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.ಅಖಿಲ ಭಾರತ ಇಮಾಮ್ಸ್ ಕೌನ್ಸಿಲ್ನ ಕೊಟ್ಟಾಯಂ ಜಿಲ್ಲಾಧ್ಯಕ್ಷರು ಸಲ್ಲಿಸಿದ್ದ ಅರ್ಜಿಯ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳುವಂತೆ ನ್ಯಾಯಾಲಯ ಆದೇಶಿಸಿದೆ.
ಅವರು ಸೆ.24ರಂದು ಕುರವಿಲಂಗಾಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ, ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ಸಿದ್ಧರಿರಲಿಲ್ಲ. ನಂತರ ಎಸ್ಪಿ ಗೂ ದೂರು ನೀಡಲಾಗಿತ್ತು.
ಸೆಪ್ಟೆಂಬರ್ 8 ರಂದು ಕುರವಿಲಂಗಾಡ್ ಸೇಂಟ್ ಮೇರಿ ಫೊರೋನಾ ಚರ್ಚ್ ನಲ್ಲಿ ಮಾರ್ ಜೋಸೆಫ್ ಕಲ್ಲರಂಗಡ್ ಅವರು ವಿವಾದಾತ್ಮಕ ಭಾಷಣವನ್ನು ಮಾಡದ್ದರು.
ಕ್ರಿಸ್ಚಿಯನ್ ಮತ್ತು ಹಿಂದೂ ಯುವಕರನ್ನು ಮಾದಕ ವ್ಯಸನಕ್ಕೆ ಗುರಿಪಡಿಸಲು ಕೇರಳದ ವಿವಿಧ ಭಾಗಗಳಲ್ಲಿ ವಿಶೇಷ ಗುಂಪುಗಳನ್ನು ರಚಿಸಲಾಗಿದೆ. ಆಯುಧಗಳಿಂದ ಯುದ್ಧ ನಡೆಸಲಾಗದ ಪ್ರದೇಶಗಳಲ್ಲಿ ಇಂತಹ ಷಡ್ಯಂತ್ರಗಳ ಮೂಲಕ ಇತರ ಧರ್ಮಗಳನ್ನು ನಾಶಪಡಿಸುವುದು ಅವರ ಉದ್ದೇಶವಾಗಿದೆ. ಹಿಂದೆಂದೂ ಎದುರಾಗದ ರೀತಿಯ ಸಮಸ್ಯೆಗಳು ಮತ್ತು ಬಿಕ್ಕಟ್ಟುಗಳು. ಎರಡು ಪ್ರಮುಖ ಮತ್ತು ಗಮನಾರ್ಹವಾದವುಗಳೆಂದರೆ ಲವ್ ಜಿಹಾದ್ ಮತ್ತು ನಾರ್ಕೋಟಿಕ್ ಜಿಹಾದ್.
ಜಗತ್ತಿನಲ್ಲಿ ನ್ಯಾಯ, ಶಾಂತಿ ಮತ್ತು ಇಸ್ಲಾಂ ಅನ್ನು ಸ್ಥಾಪಿಸಲು ಯುದ್ಧ ಮತ್ತು ಹೋರಾಟವನ್ನು ನಡೆಸಬೇಕು ಎಂದು ಕೆಲವು ಗುಂಪುಗಳು ಉಗ್ರವಾದವನ್ನು ಹುಟ್ಟುಹಾಕುತ್ತಿವೆ. ಪ್ರಪಂಚದಾದ್ಯಂತ ಜಿಹಾದಿ ಉಗ್ರಗಾಮಿಗಳು ಜನಾಂಗೀಯತೆ ಮತ್ತು ಮತಾಂಧತೆಯನ್ನು ಉತ್ತೇಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಷಪ್ ತನ್ನ ವಿವಾದಿತ ಭಾಷಣದಲ್ಲಿ ಹೇಳಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ