ಕೊಚ್ಚಿ : ತನ್ನ ರೆಸ್ಟೋರೆಂಟ್ ಮುಂದೆ ‘ಹಲಾಲ್ ನಿಷಿದ್ಧ’ ಎಂಬ ಬೋರ್ಡ್ ಹಾಕಿದ್ದಕ್ಕೆ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಸುಳ್ಳು ಆರೋಪ ಮಾಡಿದ್ದ ತುಷಾರ ಮತ್ತು ಅವರ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ನ. 2 ರಂದು ಇಬ್ಬರನ್ನು ಬಂಧಿಸಲಾಗಿದೆ ಎಂದು ಎರ್ನಾಕುಲಂ ನಗರ ಪೊಲೀಸ್ ಆಯುಕ್ತರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ರೆಸ್ಟೋರೆಂಟ್ ಮಾಲಿಕತ್ವದ ವಿಚಾರವಾಗಿ ನಡೆದ ಘರ್ಷಣೆಯಲ್ಲಿ ಇಬ್ಬರು ವ್ಯಕ್ತಿಗಳ ಮೇಲೆ ತುಷಾರ ಹಾಗೂ ಸಹಚರರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.ಪರಾರಿಯಾಗಿದ್ದ ತುಷಾರ, ಆಕೆಯ ಪತಿ ಅಜಿತ್ ಮತ್ತು ಆಕೆಯ ಸಹೋದ್ಯೋಗಿ ಅಪ್ಪು ಎಂಬುವವರನ್ನು ಕೊಲೆ ಯತ್ನ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಕೊಚ್ಚಿ ನಗರ ಪೊಲೀಸ್ ಆಯುಕ್ತ ಸಿ ಎಚ್ ನಾಗರಾಜು ಮಂಗಳವಾರ ಖಚಿತಪಡಿಸಿದ್ದಾರೆ.
ಈ ಪ್ರಕರಣದಲ್ಲಿ ಆಕೆಯ ಇಬ್ಬರು ಸಹಚರರಾದ ಅಬಿನ್ ಬೆನ್ಸಸ್ ಆಂಟೋನಿ (22) ಮತ್ತು ವಿಷ್ಣು ಶಿವದಾಸ್ (26) ಅವರನ್ನು ಪೊಲೀಸರು ಭಾನುವಾರ ಬಂಧಿಸಿದ್ದರು.
ತುಷಾರ ತನ್ನ ಎಫ್ಬಿ ಪೋಸ್ಟ್ನಲ್ಲಿ ಹಲಾಲ್ ಅಲ್ಲದ ಆಹಾರವನ್ನು ನೀಡಿದ್ದಕ್ಕಾಗಿ ಜಿಹಾದಿಗಳು ತನ್ನ ಮೇಲೆ ದಾಳಿ ಮಾಡಿದ್ದಾರೆ ಎಂದು ಸುಳ್ಳು ಆರೋಪವನ್ನು ಪ್ರಚಾರ ಪಡಿಸಿ ಕೋಮುದ್ವೇಷ ಹರಡಲು ಯತ್ನಿಸಿದ್ದರು. ಇದನ್ನು ಕೆಲವು ಸಂಘ ಪರಿವಾರದ ಗುಂಪುಗಳು ಕೈಗೆತ್ತಿಕೊಂಡು ಪ್ರಚಾರ ಪಡಿಸಿದ್ದರು.ಕೇರಳದ ಕೊಚ್ಚಿಯಲ್ಲಿ ಹಲಾಲ್ ಮಾಡದ ಆಹಾರ ಪೂರೈಸುವ ರೆಸ್ಟೋರೆಂಟ್ ಅನ್ನು ಪ್ರಾರಂಭಿಸಲು ಪ್ರಯತ್ನಿಸಿದ ತುಷರಾ ಅಜಿತ್ ಅವರ ಮೇಲೆ ಮುಸ್ಲಿಂ ಸಮುದಾಯದವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಕೆಲವು ಪೋಸ್ಟ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು.
ವರದಿಗಳ ಪ್ರಕಾರ ಧಾರ್ಮಿಕ ಕಾರಣಗಳಿಂದ ಯಾವುದೇ ಘರ್ಷಣೆ ನಡೆದಿಲ್ಲ. ಯಾವುದೋ ವಿಷಯವಾಗಿ ವಾದ ವಿವಾದಗಳು ನಡೆದಿದ್ದು ಹೋರಾಟ ಭುಗಿಲೆದ್ದಿದೆ. ಈ ಜಗಳದಲ್ಲಿ ಭಾಗಿಯಾದವರಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಯಾರು ಇಲ್ಲ ಎನ್ನಲಾಗಿದೆ.
ಅಲ್ಲದೇ, ಈ ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಕೋಮುದ್ವೇಷ ಹರಡಿದ ಆರೋದಪ ಮೇಲೆ ತುಷಾರ ವಿರುದ್ಧ ಇನ್ಫೋಪಾರ್ಕ್ ಪೊಲೀಸರು ಭಾನುವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತುಷಾರ ಅಜಿತ್ ಕಲ್ಲಾಯಿಲ್ ಎಂಬುವವರ ಫೇಸ್ಬುಕ್ ಖಾತೆಯಲ್ಲಿ ‘ಕೋಮು ದ್ವೇಷವನ್ನು ಕೆರಳಿಸುವ ಉದ್ದೇಶದಿಂದ ವೀಡಿಯೋ ಪೋಸ್ಟ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಪರ್ಯಾಸವೆಂದರೆ, ಈಗಲೂ ಕೆಲವೊಂದು ಸಂಘಪರಿವಾರ ಸಂಘಟನೆಯ ನಾಯಕರು ಈ ನಕಲಿ ವಾರ್ತೆಯನ್ನು ಹಂಚಿ ತಮ್ಮ ವಿಕೃತಿ ಮೆರೆಯುತ್ತಿದ್ದಾರೆ ಎಂಬುದಕ್ಕೆ ಈ ಕೆಳಗಿನ ಟ್ವಿಟರ್ ಪೋಸ್ಟ್ ಸಾಕ್ಷಿ.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ