ಮುಂಬೈ: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ಕ್ರಮವಾಗಿ 5, ಮತ್ತು 10 ರೂ.ನಷ್ಟು ಕೇಂದ್ರ ಸರ್ಕಾರ ಕಡಿತ ಮಾಡಿದ ಬೆನ್ನಲ್ಲೇ, ಗುರುವಾರ ಹೇಳಿಕೆ ನೀಡಿರುವ ಶಿವಸೇನಾ ಸಂಸದ ಸಂಜಯ್ ರಾವತ್, ಇಂಧನ ಬೆಲೆಯನ್ನು 50 ರೂ.ಗೆ ಇಳಿಸಲು ಬಿಜೆಪಿಯನ್ನು ಸಂಪೂರ್ಣವಾಗಿ ಸೋಲಿಸಬೇಕು ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಧನ ಬೆಲೆ 100ರೂ. ಗೆ ಏರದಂತೆ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ ಎಂದರು. ದೇಶದಲ್ಲಿ ಕೆಲ ದಿನಗಳಿಂದ ಪೆಟ್ರೋಲ್ ಬೆಲೆ ರೂ.100 ಗಿಂತ ಅಧಿಕವಾಗಿದೆ. ಪೆಟ್ರೋಲ್ ಬೆಲೆಯಲ್ಲಿ 5 ರೂ. ಕಡಿತ ಮಾಡಿರುವುದರಿಂದ ಯಾವುದೇ ಉದ್ದೇಶ ಸಾಧಿಸಿದಂತಲ್ಲ, ಅದನ್ನು ಕನಿಷ್ಠ 25ಕ್ಕೆ ರೂ.ಗೆ ತದನಂತರ 50 ರೂ.ಗೆ ಇಳಿಸಬೇಕು ಎಂದು ರಾವತ್ ಹೇಳಿದರು.
ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದ ನಂತರ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆಯಲ್ಲಿ 5 ರೂ. ಕಡಿತ ಮಾಡಿದೆ. ಇದನ್ನು 50 ರೂ.ಗೆ ಇಳಿಸಲು ಬಿಜೆಪಿಯನ್ನು ಸಂಪೂರ್ಣವಾಗಿ ಸೋಲಿಸಬೇಕು ಎಂದರು.ಜನರು ಸಾಲ ಪಡೆದು ದೀಪಾವಳಿ ಆಚರಿಸಬೇಕಾಗಿದೆ. ಹಣದುಬ್ಬರ ಕಾರಣದಿಂದ ಹಬ್ಬದ ವಾತವಾರಣ ಇಲ್ಲದಂತಾಗಿದೆ ಎಂದು ರಾಜ್ಯಸಭಾ ಸದಸ್ಯರೂ ಆಗಿರುವ ಸಂಜಯ್ ರಾವತ್ ಹೇಳಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ