ಬೆಂಗಳೂರು,ನ.5 : ಕೋವಿಡ್ 19 ಸೋಂಕು ಹರಡುವುದನ್ನು ತಡೆಯಲು ರಾಜ್ಯದಾದ್ಯಂತ ರಾತ್ರಿ 10:00 ರಿಂದ ಬೆಳಿಗ್ಗೆ 5:00 ರವರೆಗೆ ಹೇರಲಾಗಿದ್ದ ಕರ್ಫ್ಯೂ ಅನ್ನುಇಂದಿನಿಂದ (ನವೆಂಬರ್ 5) ಹಿಂಪಡೆಯಲಾಗಿದೆ.
ಅಕ್ಟೋಬರ್ 25 ರಂದು ಹಿಂದಿನ ಆದೇಶದ ಅವಧಿ ಮುಗಿದ ನಂತರ ಕರ್ನಾಟಕದಾದ್ಯಂತ ರಾತ್ರಿ ಕರ್ಫ್ಯೂ ಕುರಿತಾಗಿ ಇದ್ದ ಊಹಾಪೋಹಗಳನ್ನು ಕೊನೆಗೊಳಿಸಿರುವ ರಾಜ್ಯ ಸರ್ಕಾರ ಶುಕ್ರವಾರ ಔಪಚಾರಿಕವಾಗಿ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದಿದೆ.ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಹೊರಡಿಸಿದ ಹೊಸ ಆದೇಶದಲ್ಲಿ,ರಾತ್ರಿ ಕರ್ಫ್ಯೂ ವಿಸ್ತರಿಸುವ ಹಿಂದಿನ ಆದೇಶವನ್ನು ರದ್ದುಗೊಳಿಸಲಾಗಿದೆ.
ನಗರದಲ್ಲಿ ಕುದುರೆ ಓಟಗಳನ್ನು ಸಹ ನಡೆಸಲು ಸರ್ಕಾರ ಷರತ್ತುಬದ್ಧ ಅನುಮತಿ ನೀಡಿತ್ತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚನೆ ನೀಡಲಾಗಿದೆ. ಸ್ಥಳಾವಕಾಶದ ಸಾಮರ್ಥ್ಯದಷ್ಟು ಮಾತ್ರ ಕುದುರೆ ಓಟದ ಪೋಷಕರು ಕುದುರೆ ಓಟಗಳಲ್ಲಿ ಭಾಗವಹಿಸತಕ್ಕದು. ಪೂರ್ಣವಾಗಿ ಕೋವಿಡ್ ಲಸಿಕೆ ಪಡೆದುಕೊಂಡವರು ಮಾತ್ರ ಭಾಗವಹಿಸಬಹುದಾಗಿದೆ.
ರಾಜ್ಯದಲ್ಲಿ ಕೊರೊನಾ ಪಸರಿಸುವ ಪ್ರಮಾಣ ಕಡಿಮೆ ಆಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಒಂದೊಂದೆ ವಲಯಗಳಿಗೆ ವಿನಾಯ್ತಿ ನೀಡುತ್ತಿದೆ, ಕಳೆದ ಎರಡ್ಮೂರು ತಿಂಗಳಿನಿಂದ ನೈಟ್ ಕರ್ಫ್ಯೂ ತೆರವುಗೊಳಿಸಬೇಕೆಂದು ವ್ಯಾಪಾರಸ್ಥರು ಮನವಿ ಮಾಡಿಕೊಂಡಿದ್ದರು. ಇದೀಗ ವ್ಯಾಪಾರಿಗಳ ಮನವಿಯನ್ನು ಸಮ್ಮತಿಸಿರುವ ಸರ್ಕಾರ , ರಾತ್ರಿ ಕರ್ಫ್ಯೂ ರದ್ದು ಮಾಡಿದೆ.
ಅಕ್ಟೋಬರ್ ನಲ್ಲಿ ಪ್ರಾಥಮಿಕ ಶಾಲೆ ಆರಂಭಕ್ಕೆ ಅನುಮತಿ ನೀಡಿದ್ದ ರಾಜ್ಯ ಸರ್ಕಾರ ನಿನ್ನೆ LKG ಮತ್ತು ಯುಕೆಜಿ ಭೌತಿಕ ತರಗತಿ ನಡೆಸಲು ಅನುಮತಿ ನೀಡಿದೆ. ಶಾಲೆ ಆರಂಭಕ್ಕೆ ಹಲವು ಮಾರ್ಗಸೂಚಿಗಳನ್ನು ಸರ್ಕಾರ ಪ್ರಕಟಿಸಿದೆ. ಜೊತೆಗೆ ಕಡ್ಡಾಯವಾಗಿ ಪೋಷಕರು ಮತ್ತು ಶಿಕ್ಷಕರು ಎರಡೂ ಡೋಸ್ ಕೊರೊನಾ ಲಸಿಕೆ ಪಡೆದಿರಬೇಕೆಂಬ ಷರತ್ತು ವಿಧಿಸಿದೆ.
ರಾಜ್ಯದಲ್ಲಿ ಗುರುವಾರ 261 ಹೊಸ ಕೋವಿಡ್ -19 ಪ್ರಕರಣಗಳು ಮತ್ತು ಐದು ಸಾವುಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಜನವರಿಯಲ್ಲಿ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ- ಸಿಎಂ ಇಬ್ರಾಹಿಂ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು