ಬೆಳ್ತಂಗಡಿ :- ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ 12 ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಭಾಗವಾಗಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ವತಿಯಿಂದ ತಾಲೂಕಿನ ವಿವಿಧ ಕಡೆ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಸಂದೇಶ ಮಾತುಗಳನ್ನಾಡಿದ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾಧ್ಯಕ್ಷರಾದ ಯಾಸೀನ್ ಬಂಗೇರಕಟ್ಟೆ “ಕ್ಯಾಂಪಸ್ ಫ್ರಂಟ್ ಸ್ಥಾಪನೆಗೊಂಡು ಇಂದಿಗೆ 12 ವರ್ಷಗಳು ಪೂರ್ಣಗೊಳ್ಳುತ್ತಿದ್ದು ಈ ಶುಭ ಸಂದರ್ಭವೂ ನಮ್ಮ ಸಂಘಟನೆಯ ಪ್ರಭಾವ ಮತ್ತು ಬೆಳವಣಿಗೆಯ ಕುರಿತು ಅರಿತಾಗ ತುಂಬಾ ಸಂತೋಷವಾಗುತ್ತದೆ ಮತ್ತು ಅದರ ಜೊತೆಗೆ ಮುಂದಿನ ಸವಾಲುಗಳನ್ನು ಎದುರಿಸುವ ಕುರಿತು ಹುಮ್ಮಸ್ಸು ತುಂಬುತ್ತೆ.
ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವೆಂಬ ಖ್ಯಾತೆ ಪಡೆದ ಭಾರತದಲ್ಲಿ ಪ್ರಸ್ತುತ ಪ್ರಜಾಪ್ರಭುತ್ವ ವ್ಯವಸ್ಥೆಯೇ ಅಪಾಯದಲ್ಲಿದೆ ಎಂಬ ಆತಂಕಕಾರಿ ಕೂಗುಗಳು, ಧ್ವನಿಗಳು ಮೊಳಗುತ್ತಿರುವುದಕ್ಕೆ ವಿಶ್ವವೇ ಸಾಕ್ಷಿಯಾಗಿದೆ. ದೇಶ ಮತ್ತು ರಾಜ್ಯವನ್ನು ಆಳುತ್ತಿರುವ ಸರಕಾರಗಳು ಸಂವಿಧಾನದ ಪ್ರತಿಜ್ಞೆಯೊಂದಿಗೆ ಅಧಿಕಾರ ವಹಿಸಿಕೊಂಡ ಬಳಿಕ ಅದೇ ಸಂವಿಧಾನವನ್ನು ಬುಡಮೇಲುಗೊಳಿಸುವ ಹುನ್ನಾರದಲ್ಲಿ ತೊಡಗಿರುವಾಗ, ಸಂವಿಧಾನವನ್ನು ಉಳಿಸಿದರೆ ಮಾತ್ರ, ದೇಶ ಉಳಿಯಬಲ್ಲದು ಎಂಬ ಆಲೋಚನೆಯೊಂದಿಗೆ ಸರಕಾರ ಜಾರಿಗೆ ತರುವ ಜನವಿರೋಧಿ ನೀತಿಗಳನ್ನು, ಸಂವಿಧಾನ ವಿರೋಧಿ ಕಾಯ್ದೆಗಳನ್ನು, ವಿದ್ಯಾರ್ಥಿ ವಿರೋಧಿ ತೀರ್ಮಾನಗಳ ವಿರುದ್ಧ ರಾಜಿ ರಹಿತ ಹೋರಾಟದೊಂದಿಗೆ ಕ್ಯಾಂಪಸ್ ಫ್ರಂಟ್ ಮುಂದೆ ಸಾಗುತ್ತಿದೆ.” ಎಂದರು.

ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯೆ ಫಾತಿಮಾ, ಜಿಲ್ಲಾ ನಾಯಕರಾದ ತಾಜುದ್ದೀನ್ ಪುಂಜಾಲಕಟ್ಟೆ , ಝಾಹೀದ್ ಸುನ್ನತ್ಕೆರೆ, ಸಹಝಾದ್ ಸುನ್ನತ್ಕೆರೆ, ಸದಫ್ ಬೆಳ್ತಂಗಡಿ , ಸಹಲ್ ಉಜಿರೆ, ಬಾಕಿರ್ ಪುಂಜಾಲಕಟ್ಟೆ, ಅನ್ಸಾಫ್ ಮದ್ದಡ್ಕ, ಕೈಸ್ ಕಣಿಯೂರ್, ಮತ್ತು ಯೂನಿಟ್ ನಾಯಕರು ರವೂಫ್, ಸಹಾದ್, ಸಫ್ವಾನ್, ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ವಿದ್ಯಾರ್ಥಿನಿಯರಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ನಿರಾಕರಣೆ- ಕ್ರಮ ಕೈಗೊಳ್ಳಲು ಆಗ್ರಹ
ಬೆಳ್ತಂಗಡಿ : ಸಿಎಎ ವಿರುದ್ಧ ಎಸ್ಡಿಪಿಐ ಪ್ರತಿಭಟನೆ
SჄS 30 ನೇ ವಾರ್ಷಿಕ ಸಮ್ಮೇಳನ ದ ಪ್ರಚಾರ: SჄS ಬೆಳ್ತಂಗಡಿ ಝೋನ್ ‘ENARGIZE-2K24’ ಯಶಸ್ವಿ
ಹತ್ಯೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಬೇಕು- ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ದ ಕ ಜಿಲ್ಲೆ: 75ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ
ಗುರುವಾಯನಕೆರೆ: “ಗಣರಾಜ್ಯ ರಕ್ಷಿಸಿ” ಅಭಿಯಾನದ ಆಝಾದಿ ಎಕ್ಸ್’ಪೋ ಯಶಸ್ವಿ
ಗುರುವಾಯನಕೆರೆ: ಅಜಾದಿ ಎಕ್ಸ್’ ಪೋ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್: ಕ್ಯಾಂಪಸ್ ಅಸ್ಸೆಂಬ್ಲಿ ಸ್ಲೋಗನ್ ಸ್ಟಡಿ ಕ್ಲಾಸ್
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ- ನೂತನ ಪದಾಧಿಕಾರಿಗಳು
ಬೆಳ್ತಂಗಡಿ: ಮುಸ್ಲಿಂ ಮುಖಂಡ ಹೈದರ್ ನೀರ್ಸಾಲ್ ನಿಧನ