ಮಂಗಳೂರು, ನ.9: ಕರ್ನಾಟಕ ಮುಸ್ಲಿಂ ಜಮಾಅತ್ ಮಂಗಳೂರು ತಾಲೂಕು ಸಮಿತಿ ವತಿಯಿಂದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹಾಜಬ್ಬ ಹರೇಕಲ ರವರನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಅಧ್ಯಕ್ಷ ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ನೇತೃತ್ವದಲ್ಲಿ ಸ್ವೀಕಾರ ನೀಡಲಾಯಿತು.


ಈ ಸಂದರ್ಭದಲ್ಲಿ ಜನಾಬ್ ಅಸ್ಗರ್ ಮಂಗಳೂರು,ಅಬ್ದುಲ್ ಲತೀಫ್ ಕಾರ್ಪೊರೇಟ್ ಕಂದಕ್,ಜನಾಬ್ ರಫೀಕ್ ಮಾಸ್ಟರ್ , ಇಕ್ಬಾಲ್ ಬೈಕಂಪಾಡಿ,ಮುಖ್ತಾರ್ ಅಹ್ಮದ್ ವಕೀಲರು ಬೈಕಂಪಾಡಿ, ಶಹೀದುದ್ದೀನ್ ಬೈಕಂಪಾಡಿ,ಸಹಾಯ್ ರಾಜ್ಯ ಕೋ ಆರ್ಡಿನೇಟರ್ ಅಶ್ರಫ್ ಮಾಜಿ ಮಂಗಳೂರು, ಇಸ್ಹಾಕ್ ವಕೀಲರು ಕಡಬ,ಎಂ ಮುಹಮ್ಮದ್ ಮರವೂರು.ಹಾರಿಸ್ ಬೈಕಂಪಾಡಿ,ಆಸಿಫ್ ಹೋಂ ಪ್ಲಸ್.ಇಲ್ಯಾಸ್ ಬೈಕಂಪಾಡಿ, ಆಸಿಪ್ ಡೀಲ್ಸ್.ಮುಸ್ತಫ ಮಲಾರ್.ಬದ್ರುದ್ದೀನ್ ಹಾಜಿ ಬಜ್ಪೆ, ಮುಹಮ್ಮದ್ ಸ್ವಾಲಿಹ್ ಬಜ್ಪೆ ಉಪಸ್ಥಿತರಿದ್ದರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಸ್ವಾಗತಿಸಲು ವಿಮಾನ ನಿಲ್ಧಾಣದಲ್ಲಿ ಭಾರೀ ಜನ ಸೇರಿದ್ದರು.
ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನಿನ್ನೆ ‘ಪದ್ಮಶ್ರೀ’ ಪ್ರಶಸ್ತಿ ನೀಡಿ ಗೌರವಿಸಿತ್ತು. ಪ್ರಶಸ್ತಿ ಪಡೆಯುವ ವೇಳೆ ಹಾಜಬ್ಬ ಚಪ್ಪಲಿ ಹಾಕದೆ, ಶರ್ಟ್ , ಪಂಚೆಯಲ್ಲಿ ತೆರಳಿ ಸರಳತೆ ಮೆರೆದಿದ್ದರು.
ಕಿತ್ತಳೆ ವ್ಯಾಪಾರಿ ಹಾಜಬ್ಬ ಕಿತ್ತು ತಿನ್ನುವ ಬಡತನದ ಮಧ್ಯೆ ಶಿಕ್ಷಣಕ್ಕಾಗಿ ಜೀವನವನ್ನೇ ಮುಡುಪಾಗಿಟ್ಟು, ಹಲವು ಮಕ್ಕಳ ಬಾಳಿನಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ್ದಕ್ಕೆ ಅವರಿಗೆ ಪದ್ಮಶ್ರಿ ನೀಡಲಾಗಿದೆ.
ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ರಾಷ್ಟ್ರಪತಿ ರಾಮನಾಥ್ ಗೋವಿಂದ್ ಅವರು ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ನಿನ್ನೆ ಪ್ರದಾನ ಮಾಡಿದ್ದರು.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ