ಬೆಂಗಳೂರು: ಮುಸ್ಲಿಂ ವಿದ್ವಾಂಸರೋರ್ವರು ಸಮಾರಂಭದಲ್ಲಿ ಆಹಾರಕ್ಕೆ ಉಗುಳುತ್ತಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಕೂರಾರವರ ವೀಡಿಯೋವೊಂದು ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದೆ. ಬಿಜೆಪಿಯ ರಾಷ್ಟ್ರೀಯ ವಕ್ತಾರರಲ್ಲಿ ಹಲವರು ಈ ಕ್ಲಿಪ್ ಅನ್ನು ಶೇರ್ ಮಾಡಿದ್ದಾರೆ. ಇದೀಗ ಈ ಕುರಿತು ಸತ್ಯಶೋಧನಾ ವರದಿಯನ್ನು ಪ್ರಕಟಿಸಿರುವ altnews.in ಘಟನೆಯ ಸತ್ಯಾಸತ್ಯತೆಯನ್ನು ಬಯಲಿಗೆಳೆದಿದೆ.
“ಕೂರಾ ತಂಙಳ್ ರವರ ತಂದೆ ತಾಜುಲ್ ಉಲಮಾ ಸೈಯದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ತಂಙಳ್ ರವರ ಉರೂಸ್ ನಡೆದ ಸಂದರ್ಭದಲ್ಲಿ ಸಾಮೂಹಿಕ ಅನ್ನ ಸಂತರ್ಪಣೆ ಕಾರ್ಯಕ್ರಮವಿತ್ತು. ಆಹಾರ ವಿತರಣೆಗೂ ಮುಂಚೆ ಕುರ್ ಆನ್ ಸೂಕ್ತಗಳನ್ನು ಓದಿ ಊದುವುದು ರೂಢಿ. ಮಧ್ಯಾಹ್ನ ಮತ್ತು ರಾತ್ರಿ ಅನ್ನ ಸಂತರ್ಪಣೆ ನಡೆದಿದ್ದು, ಈ ವೇಳೆ ತಂಙಳ್ ಸೂಕ್ತಗಳನ್ನು ಓದಿ ಊದಿದ್ದರೆ ವಿನಃ ಉಗುಳಿದ್ದಲ್ಲ” ಎಂದು ಅವರ ಸಹಾಯಕ ಹನೀಫ್ ಹಾಜಿ ಉಳ್ಳಾಲ ಹೇಳಿಕೆ ನೀಡಿದ್ದಾಗಿ ವರದಿ ಉಲ್ಲೇಖಿಸಿದೆ.
ಹಝ್ರತ್ ನಿಝಾಮುದ್ದೀನ್ ಔಲಿಯಾ ದರ್ಗಾದ ಪೀರ್ಝಾದಾ ಅಲ್ತಮಶ್ “ಅವರು ಊದುತ್ತಿದ್ದಾರೆಯೇ ಹೊರತು ಉಗುಳುತ್ತಿಲ್ಲ. ಇದು ಬರ್ಕತ್ (ಅನುಗ್ರಹ)ಕ್ಕಾಗಿ ನಡೆಸುವ ಒಂದು ಧಾರ್ಮಿಕ ರೂಢಿ ಮಾತ್ರ. ಹಲವೆಡೆ ಇದನ್ನು ಪಾಲಿಸಲಾಗುತ್ತದೆ ಎಂದು ಹೇಳಿದ್ದಾರೆ.
ಈ ಹಿಂದೆಯೂ ಇಂತಹಾ ವೀಡಿಯೊವೊಂದು ಹರಿದಾಡಿದ್ದ ಸಂದರ್ಭದಲ್ಲಿ altnews.in ಸತ್ಯಾಸತ್ಯತೆಯನ್ನು ಬಯಲಿಗೆಳೆದಿತ್ತು. ಈ ವೇಳೆ ಮಾತನಾಡಿದ್ದ ಧಾರ್ಮಿಕ ವಿದ್ವಾಂಸರೋರ್ವರು, “ನಾವು ನಮಾಝ್ ಮುಗಿಸಿ ಹೊರ ಬರುವ ಸಂದರ್ಭದಲ್ಲಿ ಮಸೀದಿಯ ಹೊರಗಡೆ ಹಲವು ಮಹಿಳೆಯರು ಮಕ್ಕಳನ್ನು ಹಿಡಿದು ನಿಲ್ಲುವುದಿದೆ. ಮಸೀದಿಯಿಂದ ಹೊರಬರುವ ವಿಶ್ವಾಸಿಗಳು ಆ ಮಗುವಿನ ತಲೆಗೆ ಊದುತ್ತಾರೆ. ಅನುಗ್ರಹದ ದೃಷ್ಟಿಯಿಂದ ಇದು ಮಾಡಲಾಗುತ್ತದೆಯೇ ಹೊರತು ಬೇರೇನಿಲ್ಲ” ಎಂದು ಅವರು ಹೇಳಿದ್ದಾಗಿ ವರದಿ ಹೇಳಿದೆ.
ಈ ವೀಡಿಯೊವನ್ನು ಬಲಪಂಥೀಯರು “ಮುಸ್ಲಿಮರು ತಯಾರಿಸಿದ ಆಹಾರ ಸೇವಿಸಬೇಡಿ. ಅವರು ಆಹಾರಕ್ಕೆ ಉಗುಳುತ್ತಾರೆ” ಎಂಬಂತೆ ವಿವಿಧ ಶೀರ್ಷಿಕೆಗಳಲ್ಲಿ ಶೇರ್ ಮಾಡಿದ್ದರು. ಬಿಜೆಪಿ ರಾಷ್ಟ್ರೀಯ ವಕ್ತಾರರಾದ ಪ್ರೀತಿ ಗಾಂಧಿ, ನವೀನ್ ಕುಮಾರ್ ಜಿಂದಾಲ್, ಗೌರವ್ ಗೋಯೆಲ್ ಮುಂತಾದವರು ಟ್ವಿಟರ್ ನಲ್ಲಿ ಶೇರ್ ಮಾಡಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ