ಬೆಂಗಳೂರು: ಮುಸ್ಲಿಂ ವಿದ್ವಾಂಸರೋರ್ವರು ಸಮಾರಂಭದಲ್ಲಿ ಆಹಾರಕ್ಕೆ ಉಗುಳುತ್ತಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಕೂರಾರವರ ವೀಡಿಯೋವೊಂದು ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದೆ. ಬಿಜೆಪಿಯ ರಾಷ್ಟ್ರೀಯ ವಕ್ತಾರರಲ್ಲಿ ಹಲವರು ಈ ಕ್ಲಿಪ್ ಅನ್ನು ಶೇರ್ ಮಾಡಿದ್ದಾರೆ. ಇದೀಗ ಈ ಕುರಿತು ಸತ್ಯಶೋಧನಾ ವರದಿಯನ್ನು ಪ್ರಕಟಿಸಿರುವ altnews.in ಘಟನೆಯ ಸತ್ಯಾಸತ್ಯತೆಯನ್ನು ಬಯಲಿಗೆಳೆದಿದೆ.
“ಕೂರಾ ತಂಙಳ್ ರವರ ತಂದೆ ತಾಜುಲ್ ಉಲಮಾ ಸೈಯದ್ ಅಬ್ದುರ್ರಹ್ಮಾನ್ ಅಲ್ ಬುಖಾರಿ ತಂಙಳ್ ರವರ ಉರೂಸ್ ನಡೆದ ಸಂದರ್ಭದಲ್ಲಿ ಸಾಮೂಹಿಕ ಅನ್ನ ಸಂತರ್ಪಣೆ ಕಾರ್ಯಕ್ರಮವಿತ್ತು. ಆಹಾರ ವಿತರಣೆಗೂ ಮುಂಚೆ ಕುರ್ ಆನ್ ಸೂಕ್ತಗಳನ್ನು ಓದಿ ಊದುವುದು ರೂಢಿ. ಮಧ್ಯಾಹ್ನ ಮತ್ತು ರಾತ್ರಿ ಅನ್ನ ಸಂತರ್ಪಣೆ ನಡೆದಿದ್ದು, ಈ ವೇಳೆ ತಂಙಳ್ ಸೂಕ್ತಗಳನ್ನು ಓದಿ ಊದಿದ್ದರೆ ವಿನಃ ಉಗುಳಿದ್ದಲ್ಲ” ಎಂದು ಅವರ ಸಹಾಯಕ ಹನೀಫ್ ಹಾಜಿ ಉಳ್ಳಾಲ ಹೇಳಿಕೆ ನೀಡಿದ್ದಾಗಿ ವರದಿ ಉಲ್ಲೇಖಿಸಿದೆ.
ಹಝ್ರತ್ ನಿಝಾಮುದ್ದೀನ್ ಔಲಿಯಾ ದರ್ಗಾದ ಪೀರ್ಝಾದಾ ಅಲ್ತಮಶ್ “ಅವರು ಊದುತ್ತಿದ್ದಾರೆಯೇ ಹೊರತು ಉಗುಳುತ್ತಿಲ್ಲ. ಇದು ಬರ್ಕತ್ (ಅನುಗ್ರಹ)ಕ್ಕಾಗಿ ನಡೆಸುವ ಒಂದು ಧಾರ್ಮಿಕ ರೂಢಿ ಮಾತ್ರ. ಹಲವೆಡೆ ಇದನ್ನು ಪಾಲಿಸಲಾಗುತ್ತದೆ ಎಂದು ಹೇಳಿದ್ದಾರೆ.
ಈ ಹಿಂದೆಯೂ ಇಂತಹಾ ವೀಡಿಯೊವೊಂದು ಹರಿದಾಡಿದ್ದ ಸಂದರ್ಭದಲ್ಲಿ altnews.in ಸತ್ಯಾಸತ್ಯತೆಯನ್ನು ಬಯಲಿಗೆಳೆದಿತ್ತು. ಈ ವೇಳೆ ಮಾತನಾಡಿದ್ದ ಧಾರ್ಮಿಕ ವಿದ್ವಾಂಸರೋರ್ವರು, “ನಾವು ನಮಾಝ್ ಮುಗಿಸಿ ಹೊರ ಬರುವ ಸಂದರ್ಭದಲ್ಲಿ ಮಸೀದಿಯ ಹೊರಗಡೆ ಹಲವು ಮಹಿಳೆಯರು ಮಕ್ಕಳನ್ನು ಹಿಡಿದು ನಿಲ್ಲುವುದಿದೆ. ಮಸೀದಿಯಿಂದ ಹೊರಬರುವ ವಿಶ್ವಾಸಿಗಳು ಆ ಮಗುವಿನ ತಲೆಗೆ ಊದುತ್ತಾರೆ. ಅನುಗ್ರಹದ ದೃಷ್ಟಿಯಿಂದ ಇದು ಮಾಡಲಾಗುತ್ತದೆಯೇ ಹೊರತು ಬೇರೇನಿಲ್ಲ” ಎಂದು ಅವರು ಹೇಳಿದ್ದಾಗಿ ವರದಿ ಹೇಳಿದೆ.
ಈ ವೀಡಿಯೊವನ್ನು ಬಲಪಂಥೀಯರು “ಮುಸ್ಲಿಮರು ತಯಾರಿಸಿದ ಆಹಾರ ಸೇವಿಸಬೇಡಿ. ಅವರು ಆಹಾರಕ್ಕೆ ಉಗುಳುತ್ತಾರೆ” ಎಂಬಂತೆ ವಿವಿಧ ಶೀರ್ಷಿಕೆಗಳಲ್ಲಿ ಶೇರ್ ಮಾಡಿದ್ದರು. ಬಿಜೆಪಿ ರಾಷ್ಟ್ರೀಯ ವಕ್ತಾರರಾದ ಪ್ರೀತಿ ಗಾಂಧಿ, ನವೀನ್ ಕುಮಾರ್ ಜಿಂದಾಲ್, ಗೌರವ್ ಗೋಯೆಲ್ ಮುಂತಾದವರು ಟ್ವಿಟರ್ ನಲ್ಲಿ ಶೇರ್ ಮಾಡಿದ್ದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ