ಮನಾಮ: ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ, ಮುಸ್ಲಿಮರ ವಿರುದ್ಧ ಸಂಘಪರಿವಾರ ನಡೆಸುತ್ತಿರುವ ವ್ಯವಸ್ಥಿತ ಹಿಂಸಾಚಾರ ಮತ್ತು ಹತ್ಯೆಯನ್ನು ಬಹ್ರೇನ್ ತೀವ್ರವಾಗಿ ಖಂಡಿಸಿದೆ.
ಭಾರತವು, ಹಿಂಸಾಚಾರಗಳಿಗೆ ಕಡಿವಾಣ ಹಾಕದಿದ್ದರೆ ಭಾರತದೊಂದಿಗಿನ ವ್ಯಾಪಾರ ವಹಿವಾಟುಗಳನ್ನು ಬಹಿಷ್ಕರಿಸುವುದರೊಂದಿಗೆ ಭಾರತದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಬಹ್ರೈನ್ ಮಂತ್ರಿಮಂಡಲದ ಶಾಸಕ ಅಬ್ದುಲ್ ರಝಾಕ್ ಹತ್ತಾಬ್ ಅವರು ಎಚ್ಚರಿಸಿದ್ದಾರೆ.
ಅವರು ಇತ್ತೀಚೆಗೆ ಸಂಸತ್ತಿನಲ್ಲಿ ಮಾಡಿದ ಭಾಷಣದಲ್ಲಿ, ಅಸ್ಸಾಂ ಮತ್ತು ಕಾಶ್ಮೀರದಲ್ಲಿ ಮುಸ್ಲಿಮರು ವ್ಯಾಪಕ ಹಿಂಸಾಚಾರ, ನಿಂದನೆ ಮತ್ತು ವ್ಯವಸ್ಥಿತ ಹತ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಉಲ್ಲೇಖಿಸಿದರು. ಮುಸ್ಲಿಮರ ಸ್ವಾತಂತ್ರ್ಯ, ಹಕ್ಕು ಹಾಗೂ ಧಾರ್ಮಿಕ ಆಚರಣೆಗಳನ್ನೂ ತಡೆಯಲಾಗುತ್ತಿದೆ ಎಂದರು.
ಭಾರತದ ಈ ನಡೆ ಅಂತರಾಷ್ಟ್ರೀಯ ಕಾನೂನು ಮತ್ತು ಅಬ್ರಹಾಮಿಕ್ ಧಾರ್ಮಿಕ ಆಚರಣೆಗೆ ವಿರುದ್ಧವಾಗಿದೆ. ಮಾತ್ರವಲ್ಲ ಮಾನವೀಯತೆ ಮತ್ತು ನಾಗರಿಕರ ಸುರಕ್ಷತೆ, ಧರ್ಮ ಮತ್ತು ನಂಬಿಕೆಗಳನ್ನು ಲೆಕ್ಕಿಸದೆ ಸ್ವಾತಂತ್ರ್ಯವನ್ನು ಒದಗಿಸುವ ದೇಶದ ಜವಾಬ್ದಾರಿಗೆ ವಿರುದ್ಧವಾಗಿದೆ ಎಂದು ಬಹ್ರೇನ್ ಶಾಸಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಹ್ರೇನ್ನ ಭಾರತೀಯ ರಾಯಭಾರಿ ಮೂಲಕ ನಮ್ಮ ನಿಲುವನ್ನು ಭಾರತ ಸರ್ಕಾರಕ್ಕೆ ತಲುಪಿಸುವಂತೆ ಪದೇ ಪದೇ ಕೇಳಿಕೊಂಡಿದ್ದು, ನ್ಯಾಯಸಮ್ಮತವಲ್ಲದ ಕಾರಣಗಳಿಂದ ನುಣುಚಿಕೊಂಡಿದ್ದಾರೆ. ಭಾರತೀಯ ಮುಸ್ಲಿಮರ ಹಕ್ಕು, ಧಾರ್ಮಿಕ ಸ್ವಾತಂತ್ರ್ಯದ ಸಂರಕ್ಷಣೆಗಾಗಿ ಪ್ರಪಂಚಾದ್ಯಂತವಿರುವ ಮುಸ್ಲಿಮರು ಒಗ್ಗಟ್ಟಾಗಬೇಕೆಂದು ಅವರು ಕರೆ ನೀಡಿದರು.
ಬಹ್ರೇನ್ ಮತ್ತು ಭಾರತದ ನಡುವಿನ ಅಂತರಾಷ್ಟ್ರೀಯ ವ್ಯಾಪಾರ ವಹಿವಾಟು ವಾರ್ಷಿಕ 105 ಶತಕೋಟಿ ಡಾಲರ್ ಗಳನ್ನು ಮೀರಿದೆ. ಮುಸ್ಲಿಮರ ಮೇಲಿನ ಹಿಂಸಾಚಾರ, ನಿರ್ಬಂಧವನ್ನು ಮುಂದುವರಿಸಿದರೆ ಭಾರತವು ಆರ್ಥಿಕ ದಿಗ್ನಂಧನವನ್ನು ಎದುರಿಸಬೇಕಾಗುತ್ತದೆ ಎಂದು ಅಬ್ದುಲ್ ರಝಾಕ್ ಎಚ್ಚರಿಸಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ