ಮಂಗಳೂರು, ನ.15: ಕುಂದಾಪುರ ಮೂಲದ ಮಹಿಳೆಯು ನಗರದ ಲೇಡಿಗೋಶನ್ ಆಸ್ಪತ್ರೆಯಲ್ಲಿ ಅ.15ರಂದು ಮಗುವಿಗೆ ಜನ್ಮ ನೀಡಿದ್ದರು. ಆದರೆ ಈ ಮಗುವನ್ನು ಅದಲು-ಬದಲು ಮಾಡಲಾಗಿದೆ ಎಂದು ಮಗುವಿನ ಹೆತ್ತವರು ಆರೋಪಿಸಿದ್ದರು. ಈ ಮಗು ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಇದು ಭಾರೀ ಸುದ್ದಿಯಾಗಿತ್ತು. ಆ ಹಿನ್ನೆಲೆಯಲ್ಲಿ ಮಗುವಿನ ಡಿಎನ್ಎ ಪರೀಕ್ಷೆಗಾಗಿ ಮಾದರಿಯನ್ನು ಹೈದರಾಬಾದಿಗೆ ಕಳುಹಿಸಿಕೊಡಲಾಗಿತ್ತು. ಆದರೆ ಪರೀಕ್ಷೆಯ ವರದಿ ಬರುವ ಮುನ್ನವೇ ಮಗು ಮೃತಪಟ್ಟಿದೆ. ಉಸಿರಾಟದ ತೊಂದರೆಯಿಂದ ಮಗು ಮೃತಪಟ್ಟಿದೆ ಎಂದು ಹೇಳಲಾಗುತ್ತಿದೆ. ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾ ಪ್ರಸಾದ್ ಮಗು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಅಲ್ಲದೆ ಮಗುವಿನ ಅಂತ್ಯಸಂಸ್ಕಾರ ಕಾನೂನಿನ ಪ್ರಕಾರವೇ ನಡೆಯಲಿದೆ. ಮಗುವಿನ ಪೋಷಕರಿಗೂ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
”ನಮಗೆ ಆಸ್ಪತ್ರೆಯ ಸಿಬ್ಬಂದಿ ಮೊದಲು ಮಗು ಹೆಣ್ಣು ಎಂದು ಹೇಳಿದ್ದರು. ದಾಖಲೆಗಳಲ್ಲಿ ಕೂಡಾ ಅದನ್ನೇ ನಮೂದಿಸಿದ್ದರು. ಆದರೆ ನಮ್ಮ ಕೈಗೆ ಗಂಡು ಮಗುವನ್ನು ಕೊಟ್ಟಿದ್ದರು” ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದರು. ”ಮಗುವಿನ ಡಿಎನ್ಎ ಪರೀಕ್ಷೆ ಇನ್ನೂ ಬಂದಿಲ್ಲ. ಅದಕ್ಕಿಂತ ಮುಂಚೆಯೇ ಮಗು ಮೃತಪಟ್ಟಿವೆ. ಆಸ್ಪತ್ರೆಯಲ್ಲಿ ಚೆನ್ನಾಗಿ ಆರೈಕೆ ಮಾಡದ ಕಾರಣ ಹೀಗಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮಗುವನ್ನು ಬಿಟ್ಟುಕೊಡುವುದಾಗಿ ವೈದ್ಯರು ತಿಳಿಸಿದರು. ಹಾಗಾಗಿ ನಾವು ಮೃತದೇಹವನ್ನು ಪಡೆದು ಕುಂದಾಪುರ ಮಸೀದಿಯ ಆವರಣದಲ್ಲಿ ದಫನ ಮಾಡುವೆವು. ಆ ಬಳಿಕ ಕಾನೂನು ಹೋರಾಟ ಮುಂದುವರಿಸುವೆವು” ಎಂದು ಪೋಷಕರು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ