ಮಂಗಳೂರು: SSF ಮುಡಿಪು ಸೆಕ್ಟರ್ ವ್ಯಾಪ್ತಿಗೊಳಪಟ್ಟ ಸುಬ್ಬಗುಳಿಯ ತಾಜುಲ್ ಉಲಮಾ ಜುಮಾ ಮಸೀದಿಗೆ ಕಿಡಿಗೇಡಿಗಳು ಹಾನಿಯುಂಟು ಮಾಡಲು ಯತ್ನಿಸಿದ್ದು ಮತ್ತು ಅಲ್ಲಿನ ಧರ್ಮಗುರುಗಳ ಮೇಲೆ ಹಲ್ಲೆಯತ್ನ ಘಟನೆಗೆ ಧಾವಿಸಿರುವುದನ್ನ ಖಂಡಿಸಿ ಮಸೀದಿ ಆವರಣದಲ್ಲಿ ಸುನ್ನೀ ಸ್ಟೂಡೆಂಟ್ ಫೆಡರೇಶನ್ SSF ವತಿಯಿಂದ ಖಂಡನಾ ಸಭೆ ನಡೆಯಿತು.

ಸಭೆಯಲ್ಲಿ ಸುನ್ನೀ ಯುವಜನ ಸಂಘ, ಸುನ್ನೀ ಜಂಇಯತುಲ್ ಉಲಮಾ, ಸುನ್ನೀ ಜಂಇಯತುಲ್ ಮುಅಲ್ಲಿಮೀನ್, ಸುನ್ನೀ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಮೊದಲಾದ ಸಂಘಟನೆಗಳ ನೇತಾರರು ಭಾಗವಹಿಸಿ ಶಾಂತಿಯುತ ಪ್ರತಿಭಟನೆ ನಡೆಯಿತು.
SSF ಜಿಲ್ಲಾಧ್ಯಕ್ಷರಾಗಿರುವ ನವಾಝ್ ಸಖಾಫಿ ಉಸ್ತಾದರು ಜಿಲ್ಲೆಯಲ್ಲಿ ಕಮ್ಯುನಲ್ ಆಗಿರು ಇಂತಹ ಅಹಿತಕರ ಘಟನೆಗಳು ಹಲವಾರು ಜಾಗಗಳಲ್ಲಿ ನಡೆಯುತ್ತಿದೆ.ಸರಕಾರ ಎಚ್ಚೆತ್ತು ಕೊಳ್ಳದಿದ್ದಲ್ಲಿ ಆರಕ್ಷಕರು ಸರಿಯಾದ ಕ್ರಮ ಕೈಗೊಳ್ಳದಿದ್ದಲ್ಲಿ ಇಂತಹ ಅನಾಹುತಗಳು ಇನ್ನಷ್ಟು ನಡೆಯಬಹುದು.ಈ ಕುರಿತು ಸರಿಯಾದ ಕ್ರಮ ಕೈಗೊಳ್ಳಬೆಕೆಂದು ಮನವಿ ಮಾಡಿದರು.

ಇಲ್ಲಿನ ಜನ ಐಖ್ಯತೆಯಲ್ಲಿ ಜೀವಿಸಲು ಪ್ರಾಮುಖ್ಯತೆಯನ್ನ ನೀಡುವವರಾಗಿದ್ದು ಸಾಹೋದರ್ಯತೆಯಿಂದ ಭಾಳುವ ಪ್ರದೇಶವಾಗಿದೆ, ಕಿಡಿಗೇಡಿಗಳಿಂದ ಅಶಾಂತಿ ಉಂಟಾಗಿದೆ.ಕೋಮುವಾದ ಪಸರಿಸು ಪ್ರಯತ್ನ ನಡೆದಿದೆ. ಇವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸೆಕ್ಟರ್ ನ ಅಧ್ಯಕ್ಷರು ರಾಫಿಹ್ ಕಣ್ಣೂರು ಪೋಲೀಸ್ ಅಧಿಕಾರಿಗಳಿಗೆ ಮಾಧ್ಯಮದ ಮುಖಾಂತರ ಮನವಿ ಮಾಡಿಕೊಂಡರು.
ಕಾರ್ಯಕ್ರಮ ಮುಗಿದ ಬಳಿಕ ಸುಬ್ಬಗೋಳಿ ಯೂನಿಟ್ ನ ಅಧೀನದಲ್ಲಿ ಸೆಕ್ಟರ್ ಹಾಗೂ ಜಿಲ್ಲೆಯ ನಾಯಕರ ಸಮ್ಮುಖದಲ್ಲಿ ಠಾಣಾಧಿಕಾರಿಗಳಿಗೆ ಮನವಿ ಪತ್ರವನ್ನ ನೀಡಿದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ