ರಿಯಾದ್, ನವೆಂಬರ್.15: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ , ಕುರ್ನಾಡು ಸುಬ್ಬಗುಳಿ ಎಂಬಲ್ಲಿ ಮಸೀದಿ ಇಮಾಮರ ಮೇಲೆ ಸಮಾಜ ಘಾತುಕ ಶಕ್ತಿಗಳು ದಾಳಿ ಮಾಡಲು ಬಂದು ಇಮಾಮರನ್ನು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಮಸೀದಿಗೆ ಹಾನಿಗೊಳಿಸಿದಂತಹಾ ಘಟನೆಗಳು ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸಲು ಹೇತುವಾಗಿದೆ.
ಇತ್ತೀಚಿನ ದಿನಗಳಲ್ಲಿ, ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಕಿಡಿಗೇಡಿಗಳು ನಡೆಸುತ್ತಿರುವ ದೌರ್ಜನ್ಯಗಳು ಜಿಲ್ಲೆಯ ಹಲವು ಕಡೆಗಳಿಂದ ವರದಿಯಾಗುತ್ತಿದೆ.
ಇಂತಹ ಶಕ್ತಿಗಳ ವಿರುದ್ಧ ಶೀಘ್ರವೇ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಕಲ್ಚರಲ್ ಫೌಂಡೇಶನ್ KCF ಸೌದಿ ರಾಷ್ಟ್ರೀಯ ಸಮಿತಿ ಆಗ್ರಹಿಸಿದೆ . ಅದೇ ರೀತಿ ಸುಳ್ಯದಲ್ಲಿ ಪ್ರವಾದಿ ನಿಂದನೆ ಮಾಡಿದ ವ್ಯಕ್ತಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.







