ಕರ್ನಾಟಕ ರಾಜ್ಯ ಸುನ್ನೀ ಸ್ಟುಡೆಂಟ್ಸ್ ಫೆಡರೇಶನ್ ಎಸ್.ಎಸ್.ಎಫ್ ಸುಳ್ಯ ಡಿವಿಷನ್ ಪ್ರತಿಭೋತ್ಸವವು ಬೆಳ್ಳಾರೆಯ ಮಾಲಂಗೇರಿಯಲ್ಲಿ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಸಯ್ಯಿದ್ ಕುಂಞಕೋಯ ತಂಙಳ್ ಸಅದಿಯವರು ಧ್ವಜಾರೋಹಣ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಎಸ್ ಎಸ್ ಎಫ್ ಸುಳ್ಯ ಡಿವಿಷನ್ ಅಧ್ಯಕ್ಷರಾದ ಫೈಝಲ್ ಝುಹ್ರಿ ಕಲ್ಲುಗುಂಡಿ ಅಧ್ಯಕ್ಷತೆ ವಹಿಸಿದರು.
ನಂತರ ಎಂಟು ವಿಭಾಗಗಳಾಗಿ ಐದು ಸೆಕ್ಟರ್ ಗಳಿಂದ ಆಯ್ಕೆಯಾದ ಇನ್ನೂರೈವತ್ತರಷ್ಟು ಪ್ರತಿಭೆಗಳು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು. ಸಾಯಂಕಾಲ ಟೀಂ ಪ್ರತಿಭೋತ್ಸವ ಚೆಯರ್ಮೇನ್ ಜುನೈದ್ ಸಖಾಫಿ ಜೀರ್ಮುಕ್ಕಿಯವರ ಅಧ್ಯಕ್ಷತೆಯಲ್ಲಿ ಸಮಾರೋಪ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಸುಳ್ಯ ಸೆಕ್ಟರ್ ಚಾಂಪಿಯನ್ ಹಾಗೂ ನಿಂತಿಕಲ್ಲು ಸೆಕ್ಟರ್ ರನ್ನರ್ ಗಳಾಗಿ ಹೊರಹೊಮ್ಮಿ ಟ್ರೋಫಿ ವಿತರಣೆಯನ್ನು ಸಯ್ಯಿದ್ ತ್ವಾಹಿರ್ ತಂಙಳ್ ಸಅದಿಯವರು ವಿತರಿಸಿದರು. ಜನರಲ್ ಕನ್ವೀನರ್ ಸ್ವಬಾಹ್ ಹಿಮಮಿ ಬೀಜಕೊಚ್ಚಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ