ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಚಿರತೆ ಕಾಟ ಶುರುವಾಗಿದೆ. ರಾತ್ರಿ ವೇಳೆ ರನ್ ವೇ ಬಳಿ 3-4 ಬಾರಿ ಚಿರತೆ ಓಡಾಟ ಕಂಡುಬರುತ್ತಿದೆ. ಇದು ವಿಮಾನನಿಲ್ದಾಣ ದ ಭದ್ರತಾ ವಿಭಾಗದ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಚಿರತೆ ಮಾತ್ರವಲ್ಲದೆ ನವಿಲು, ಕಾಡು ಹಂದಿ, ನರಿಗಳು ಸೇರಿದಂತೆ ಕಾಡು ಪ್ರಾಣಿ ಮತ್ತು ಪಕ್ಷಿಗಳು ರನ್ ವೇ ಬಳಿ ಕಂಡು ಬರುತ್ತಿವೆ.
ಚಿರತೆ ಪತ್ತೆಯಾಗಿರುವ ಕಾರಣ ಆತಂಕಗೊಂಡಿರುವ ವಿಮಾನ ನಿಲ್ದಾಣ ಅಧಿಕಾರಿಗಳು ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ವಿಮಾನ ನಿಲ್ದಾಣದ ಆವರಣದಲ್ಲಿ ಕಾರ್ಯಾಚರಣೆ ಆರಂಭಿಸಿದ್ದಾರೆ.
ಅರಣ್ಯ ಇಲಾಖೆಯ ಪ್ರಾಣಿ ಸರ್ವೇ ವರದಿ ಪ್ರಕಾರ ಕಳೆದ ಐದು ವರ್ಷಗಳ ಹಿಂದೆ ಮಂಗಳೂರು ರೇಂಜ್ ವ್ಯಾಪ್ತಿಯಲ್ಲಿ 2-3 ಚಿರತೆಗಳಿದ್ದವು ಆದರೆ ಪ್ರಸ್ತುತ ಇವುಗಳ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ ಎಂದು ಹೇಳಲಾಗಿದೆ.
ಬಜ್ಪೆಯ ಕೆಂಜಾರಿನಲ್ಲಿ ಗುಡ್ಡದ ಮೇಲಿರುವ ವಿಮಾನ ನಿಲ್ದಾಣದ ಸುತ್ತಮುತ್ತ ಕಾಡು ಇರುವ ಕಾರಣ ಚಿರತೆಗಳ ಓಡಾಟ ಸಾಮಾನ್ಯ ಎಂದು ಹೇಳಲಾಗಿದೆ. ಆದರೆ ಕಳೆದ ಕೆಲವು ದಿನಗಳಿಂದ ರಾತ್ರಿ ಹೊತ್ತು ಚಿರತೆಗಳು ವಿಮಾನ ನಿಲ್ದಾಣ ಪ್ರವೇಶಿಸುತ್ತಿವೆ. ಕಳೆದ ಕೆಲವು ದಿನಗಳಿಂದ ಚಿರತೆ ರನ್ ವೇ ಸುತ್ತ ಕಾಣಿಸಿಕೊಳ್ಳುತ್ತಿವೆ. ಆಹಾರ ಅರಸಿ ಆಕಸ್ಮಿಕವಾಗಿ ಬಂದಿರಬಹುದು ಅಂದುಕೊಂಡಿದ್ದ ಅಧಿಕಾರಿಗಳಿಗೆ ಇತ್ತೀಚೆಗೆ ಸರಾಗವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದು ಅಚ್ಚರಿ ತಂದಿದೆ. ವಿಮಾನ ಲ್ಯಾಂಡಿಂಗ್ ಅಥವಾ ಟೇಕ್ ಆಫ್ ಸಂದರ್ಭ ರನ್ ವೇ ಆಸುಪಾಸು ಪ್ರಾಣಿಗಳ ಓಡಾಟ ತೀರಾ ಅಪಾಯಕಾರಿಯಾಗಿರುವ ಹಿನ್ನೆಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ.
ವಿಮಾನ ನಿಲ್ದಾಣದೊಳಗೆ ಚಿರತೆ ಹಿಡಿಯಲು ಬೋನು:
ಚಿರತೆಗಳಿಂದ ಭಯಗೊಂಡಿರುವ ಮಂಗಳೂರು ವಿಮಾನ ನಿಲ್ದಾಣದ ಅಧಿಕಾರಿಗಳು, ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಅಧಿಕಾರಿಗಳ ಮನವಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯೂ ಚುರುಕಾಗಿದ್ದು, ಚಿರತೆ ಪತ್ತೆ ಕಾರ್ಯಾಚರಣೆ ಆರಂಭಿಸಿದೆ. ಚಿರತೆ ಸೆರೆ ಹಿಡಿಯಲು ವಿಮಾನ ನಿಲ್ದಾಣದ ಒಳಗೆ 3 ಬೋನುಗಳನ್ನು ಇಡಲಾಗಿದೆ. ಸುತ್ತಲಿನ ಅರಣ್ಯ ಪ್ರದೇಶದಲ್ಲೂ 2 ಬೋನು ಇಡಲಾಗಿದೆ. ಒಟ್ಟು 5 ಬೋನುಗಳನ್ನು ಅಳವಡಿಸಲಾಗಿದೆ.
ಚಿರತೆಗಳ ಓಡಾಟದಿಂದ ವಿಮಾನನಿಲ್ದಾಣ ನಿಲ್ದಾಣದ ಅಧಿಕಾರಿಗಳು ಹಾಗು ಸಾರ್ವಜನಿಕರು ಭಯ ಪಡುವ ಅವಶ್ಯಕತೆಯಿಲ್ಲ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ ವಿಮಾನ ನಿಲ್ದಾಣ ಸುತ್ತಮುತ್ತಲಲ್ಲಿ ಚಿರತೆಯ ಚಲನವಲನ ಕಂಡುಬಂದರೆ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದ್ದು ಚಿರತೆ ಸೆರೆ ಹಿಡಿಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ.
ಚಿರತೆಗಳು ರನ್ ವೇ ಪ್ರವೇಶಿಸದಂತೆ ಬಾರಿ ಕಟ್ಟೆಚ್ಚರ ವಹಿಸಲಾಗಿದೆ. ಒಂದು ವೇಳೆ ವಿಮಾನ ಲ್ಯಾಂಡಿಂಗ್ ಅಥವಾ ಟೇಕಾಫ್ ಆಗುವ ವೇಳೆ ಚಿರತೆ ಅಡ್ಡಬಂದರೆ ಅನಾಹುತವಾಗುವ ಆತಂಕ ವಿಮಾನ ನಿಲ್ದಾಣದ ಪ್ರಾಧಿಕಾರದ್ದು ಆಗಿದೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ